ಯೋಗಿ ಆದಿತ್ಯನಾಥ್ 
ದೇಶ

ಕೊಲ್ಕತ್ತಾಕ್ಕೆ ಭೇಟಿ ನೀಡಲು ಯೋಗಿ ಆದಿತ್ಯನಾಥ್ ಗೆ ಅನುಮತಿ ನಿರಾಕರಣೆ- ಬಿಜೆಪಿ

ಚುನಾವಣಾ ಪ್ರಚಾರಕ್ಕಾಗಿ ಕೊಲ್ಕತ್ತಾಗೆ ಭೇಟಿ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಪ್ರವೇಶ ನಿರಾಕರಣೆ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ಹೇಳಿದ್ದಾರೆ.

ಲಖನೌ: ಚುನಾವಣಾ ಪ್ರಚಾರಕ್ಕಾಗಿ ಕೊಲ್ಕತ್ತಾಗೆ ಭೇಟಿ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಪ್ರವೇಶ ನಿರಾಕರಣೆ ಬೆನ್ನಲ್ಲೇ  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರಿಗೂ ಪ್ರವೇಶ ನಿರಾಕರಿಸಲಾಗಿದೆ  ಎಂದು ಪಕ್ಷದ ಉನ್ನತ ನಾಯಕರೊಬ್ಬರು ಹೇಳಿದ್ದಾರೆ.

 ಸ್ಥಳೀಯ ಜಿಲ್ಲಾಡಳಿತದಿಂದ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ ಮೇ 15 ರಂದು ದಕ್ಷಿಣ ಪಶ್ಚಿಮ ಕೊಲ್ಕತ್ತಾದಲ್ಲಿನ ಬೆಹಾಲದ ಜೆಮ್ಸ್ ಲಾಂಗ್  ಸರಾಣಿ ಬಳಿ ಆಯೋಜಿಸಲಾಗಿದ್ದ ಆದಿತ್ಯನಾಥ್ ಅವರ ಚುನಾವಣಾ ಪ್ರಚಾರ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೇ 19 ರಂದು ನಡೆಯಲಿರುವ ಕೊನೆಯ ಹಂತದ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ  ಮೇ 15 ರಂದು ಉತ್ತರ 24 ಪರಗಣ ಜಿಲ್ಲೆಯ ಹಬ್ರಾ ಮತ್ತು ಉತ್ತರ ಕೊಲ್ಕತ್ತಾದ ಪೊಲ್ ಬಾಗನ್ ನಲ್ಲಿ ಯೋಗಿ ಆದಿತ್ಯನಾಥ್ ಅವರ ಪ್ರಚಾರ ಸಭೆಯನ್ನು ಆಯೋಜಿಸಲಾಗಿತ್ತು ಎಂದು ಪಕ್ಷದ ಮೂಲಗಳು ಹೇಳಿವೆ.

ಯೋಗಿ ಆದಿತ್ಯನಾಥ್ ಅವರಂತೆ ಜಾದವ್ ಪುರದಲ್ಲಿ ಇಂದು ಆಯೋಜಿಸಲಾಗಿದ್ದ ಅಮಿತ್ ಶಾ ಅವರ ಚುನಾವಣಾ ಪ್ರಚಾರ ಸಭೆ ವಿರುದ್ಧ  ಕ್ರಮ ಕೈಗೊಳ್ಳಲಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಹಾಸ್ಯದಂತಿದೆ. ಕೊನೆಯ ಗಳಿಗೆಯಲ್ಲಿ  ಜಾದವ್ ಪುರದಲ್ಲಿ ಅಮಿತ್ ಶಾ ಅವರ ಚುನಾವಣಾ ಪ್ರಚಾರಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ದಕ್ಷಿಣ ಕೊಲ್ಕತ್ತಾದಲ್ಲಿ ಯೋಗಿ ಆದಿತ್ಯನಾಥ್ ಅವರ ಕಾರ್ಯಕ್ರಮಕ್ಕೂ ಪ್ರವೇಶ ನಿರಾಕರಿಸಲಾಗಿದೆ. ಡಿಎಂ ಹಾಗೂ ಸಿಇಒ ಟಿಎಂಸಿ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸುನೀಲ್  ದೇವಧರ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ಕಡಿಮೆ ಮತದಾರರ ಭಯದಿಂದಾಗಿ ಬಿಜೆಪಿ ಶಾ ಅವರ ಚುನಾವಣಾ ಪ್ರಚಾರ ಸಭೆಯನ್ನು ರದ್ದುಪಡಿಸಿದೆ  ಎಂದು ಟಿಎಂಸಿ ಹೇಳಿಕೆ ನೀಡಿದೆ. ಆದರೆ, ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ  ಸಭೆ ರದ್ದಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT