ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಮತ್ತು ಪ್ರಿಯಾಂಕಾ ಗಾಂಧಿ ಪ್ರಚಾರದಲ್ಲಿ ತೊಡಗಿರುವುದು 
ದೇಶ

ಮೋದಿಗೆ ಪ್ಯಾಂಟ್ ಹಾಕುವುದು ಹೇಗೆ ಎಂದು ಗೊತ್ತಿಲ್ಲದ ವಯಸ್ಸಿನಲ್ಲಿಯೇ ಕಾಂಗ್ರೆಸ್ ಪಕ್ಷ ಸೇನೆಯನ್ನು ಕಟ್ಟಿದೆ: ಕಮಲ್ ನಾಥ್

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ಯಾಂಟ್ ಧರಿಸುವುದು ಹೇಗೆ ಎಂದು ಗೊತ್ತಿಲ್ಲದ ವಯಸ್ಸಿ...

ರಾಟ್ಲಾಮ್(ಮಧ್ಯ ಪ್ರದೇಶ): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ಯಾಂಟ್ ಧರಿಸುವುದು ಹೇಗೆ ಎಂದು ಗೊತ್ತಿಲ್ಲದ ವಯಸ್ಸಿನಲ್ಲಿಯೇ ಕಾಂಗ್ರೆಸ್ ಪಕ್ಷ ಸೇನಾಪಡೆಯನ್ನು ಕಟ್ಟಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿಕೆ ನೀಡಿದ್ದಾರೆ.
ಮೋದಿಯವರು ರಾಷ್ಟ್ರದ ಭದ್ರತೆ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನಾನು ಹೇಳುವುದಿಷ್ಟೆ, ನೀವು ಪ್ಯಾಂಟ್ ಹಾಕುವುದು ಹೇಗೆ ಎಂದು ಗೊತ್ತಿಲ್ಲದ ವಯಸ್ಸಿನಲ್ಲಿಯೇ ಪಂಡಿತ್ ಜವಹರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿಯವರು ದೇಶದ ಸೇನಾಪಡೆಯನ್ನು ಕಟ್ಟಿದ್ದರು ಎಂದು ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಮೋದಿಯವರನ್ನು ಲೇವಡಿ ಮಾಡಿದರು.
ಬಿಜೆಪಿ ಆಡಳಿತದಡಿಯಲ್ಲಿ ಹಲವು ಭಯಾನಕ ಉಗ್ರಗಾಮಿ ದಾಳಿಗಳು ನಡೆದಿವೆ. 2002ರಲ್ಲಿ ಸಂಸತ್ತು ಮೇಲೆ ದಾಳಿಯಾದಾಗ ಮತ್ತು ಈ ವರ್ಷ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು ಎಂದರು.
ಇಂದು ಬೆಳಗ್ಗೆ ಇಲ್ಲಿಗೆ ರಾಟ್ಲಮ್ ಗೆ ಪ್ರಧಾನಿ ಮೋದಿ ಬಂದಿದ್ದರು ಎಂದು ನಾನು ಕೇಳಲ್ಪಟ್ಟೆ. ಐದು ವರ್ಷಗಳಿಂದ ಅವರು ಸುಳ್ಳು ಹೇಳುತ್ತಿದ್ದಾರೆ. ಇನ್ನು 140 ಗಂಟೆ ಉಳಿದಿದೆ. ಮೋದಿಯವರು ಬುಡಕಟ್ಟು ಜನಾಂಗದವರನ್ನು ರಕ್ಷಿಸುತ್ತೇನೆ ಎಂದದ್ದಾರೆ. ಆದರೆ ಅವರು ಕಳೆದ 5 ವರ್ಷಗಳಲ್ಲಿ ಏನು ಮಾಡಿದರು ಎಂದು ನಾನು ಅವರಿಗೆ ಕೇಳಬಯಸುತ್ತೇನೆ ಎಂದರು.
ರೈತರ ಸಾಲಮನ್ನಾ ವಿಷಯವನ್ನು ಪ್ರಸ್ತಾಪಿಸಿದ ಕಮಲ್ ನಾಥ್, ರೈತರ ಸಾಲಮನ್ನಾ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ನಾವು 21 ಲಕ್ಷ ರೈತರ ಸಾಲಮನ್ನಾ ಮಾಡಿದ್ದೇವೆ. ಚುನಾವಣಾ ನೀತಿ ಸಂಹಿತೆ ಹಿಂತೆಗೆದುಕೊಂಡ ನಂತರ ಪ್ರತಿ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT