ಪ್ರಧಾನಿ ಮೋದಿ 
ದೇಶ

ಜನರ ತೀರ್ಪು ಮಮತಾ ಬ್ಯಾನರ್ಜಿಯ ಅಧಿಕಾರದ ಮದವನ್ನು ಹೋಗಲಾಡಿಸಲಿದೆ- ಪ್ರಧಾನಿ ಮೋದಿ

ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ. ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಟಾಕಿ:  ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ.  ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ  ವೇಳೆಯಲ್ಲಿ ಟಿಎಂಸಿ ಗೂಂಡಾಗಳ ದಾಳಿಯನ್ನು ಇಡೀ ದೇಶ ಟಿವಿ ಮೂಲಕ ನೋಡಿದೆ.ಪಶ್ಚಿಮ  ಬಂಗಾಳದಲ್ಲಿನ ಚುನಾವಣಾ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುತ್ತಿದ ಎಂದರು.

 ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳುವ ಸಲುವಾಗಿ ಅಮಿತ್ ಶಾ ರೋಡ್ ವೇಳೆಯಲ್ಲಿ ಟಿಎಂಸಿ ದಾಳಿ ನಡೆಸಿದೆ.ಮಮತಾ ಬ್ಯಾನರ್ಜಿಗೂಂಡಾಗಳು ಗನ್ ಗಳು ಹಾಗೂ ಬಾಂಬ್ ಗಳನ್ನು ಹೊಂದುವ ಮೂಲಕ ದಾಳಿ ನಡೆಸಿದ್ದಾರೆ. ಆಕೆಯ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡಿದೆ ಎಂದು ಆರೋಪಿಸಿದರು.

ಮಮತಾ ಬ್ಯಾನರ್ಜಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದರಿಂದ ಇಲ್ಲಿಯ ಜನರು ಗೌರವಿಸುತ್ತಿದ್ದಾರೆ. ಆದರೆ, ಅಧಿಕಾರದ ಮದವನ್ನೇರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡ ಮೇಲು ಮಾಡುತ್ತಿದ್ದಾರೆ ಎಂದು ಆರೋಪಿಸಿದರು .

ಮಮತಾ ಬ್ಯಾನರ್ಜಿ ಚಿಟ್ ಫಂಡ್ ಹಗರಣದಲ್ಲಿ ಜನರ ಹಣವನ್ನು ಲೂಟಿ ಮಾಡಿದ್ದಾರೆ. ಇದಕ್ಕೆ ವಿವರಣೆ ಕೇಳಬಯಸಿದವರಿಗೆ ಬೈದಿದ್ದಾರೆ.ಪ್ರಜಾಪ್ರಭುತ್ವ ಮುಖ್ಯಮಂತ್ರಿ ಹುದ್ದೆ ನೀಡಿದೆ. ಆದರೆ, ಅವರು ಪ್ರಜಾಪ್ರಭುತ್ವವನ್ನು ಹತ್ಯೆ ಮಾಡುತ್ತಿದ್ದಾರೆ. ಇಡೀ ದೇಶ ಅವರ ದುರಂಹಕಾರದ ಆಡಳಿತವನ್ನು ನೋಡುಿದೆ. ರಾಜ್ಯದ ಬಾದ್ರಾ ಲೊಕ್ ಸಂಸ್ಕೃತಿ ಹಾಳಾಗಲು ಮಮತಾ ಬ್ಯಾನರ್ಜಿ ಹೊಣೆ ಎಂದು ನರೇಂದ್ರ ಮೋದಿ ಆರೋಪಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT