ದೇಶ

ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಮೋದಿಗೆ ರಾಹುಲ್ ಅಭಿನಂದನೆ

Nagaraja AB

ನವದೆಹಲಿ: ನರೇಂದ್ರಮೋದಿ 2014ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಇಂದು ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದಾರೆ.

ಆದಾಗ್ಯೂ,  ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಾತನಾಡಲಿದ್ದು ತಮ್ಮಗೆ ಸುದ್ದಿಗಾರರು ಯಾವುದೇ ಪ್ರಶ್ನೆ ಕೇಳಬಾರದು. ಶಿಸ್ತು ಕಾಪಾಡುವುದು ಬಿಜೆಪಿಯ ಸಿದ್ಧಾಂತವಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಈ ನಿರ್ಧಾರಕ್ಕೆ ಟ್ವೀಟರ್ ನಲ್ಲಿ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.ಮೋದಿಗೆ ಅಭಿನಂದನೆಗಳು.ಅತ್ಯುತ್ತಮ ಸುದ್ದಿಗೋಷ್ಠಿ,ಮುಂದಿನ ದಿನಗಳಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರಿಸಲು ಅಮಿತ್ ಶಾ ಅವಕಾಶ ನೀಡಲಿದ್ದಾರೆ. ಚೆನ್ನಾಗಿ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ
SCROLL FOR NEXT