ದೇಶ

ಪಂಜಾಬ್ : ಕಾಂಗ್ರೆಸ್ ಹೀನಾಯವಾಗಿ ಸೋತರೆ ರಾಜೀನಾಮೆ- ಕ್ಯಾಪ್ಟನ್ ಅಮರೀಂದರ್ ಸಿಂಗ್

Nagaraja AB
ಅಮೃತಸರ: ಲೋಕಸಭಾ ಚುನಾವಣೆಯಲ್ಲಿ ಪಂಜಾಬಿನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತರೆ ಅದರ ಜವಾವ್ದಾರಿಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಪಂಜಾಬಿನಲ್ಲಿ ಕಾಂಗ್ರೆಸ್ ನೆಲಕಚ್ಚಿದರೆ ಏನು ಮಾಡಬಹುದು ಎಂದು ನೀವು ಯೋಚಿಸಿದರೆ ನಾನು ಜವಾಬ್ದಾರಿಯನ್ನು ತೆಗೆದುಕೊಂಡು ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ.
ನನ್ನಂತೆಯೇ ಸಂಪುಟದ ಸಹೋದ್ಯೋಗಿಗಳು, ಪಕ್ಷದ ಕಾರ್ಯಕರ್ತರು ಜವಾಬ್ದಾರಿ ಹೊರಬೇಕಾಗುತ್ತದೆ. ಇದು ರಾಜ್ಯದಲ್ಲಿ ಕಾಂಗ್ರೆಸ್  ಸಾಮರ್ಥ್ಯವನ್ನು ಪ್ರತಿಬಿಂಬಿಸಲಿದೆ ಎಂದು ಸಿಂಗ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ
SCROLL FOR NEXT