ನೀತಿ ಸಂಹಿತೆ ನಿರ್ವಹಣೆ: ಚುನಾವಣಾ ಆಯೋಗದಲ್ಲಿ ಬಿರುಕು?: ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಿಷ್ಟು! 
ದೇಶ

ನೀತಿ ಸಂಹಿತೆ ನಿರ್ವಹಣೆ: ಚುನಾವಣಾ ಆಯೋಗದಲ್ಲಿ ಬಿರುಕು?: ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಿಷ್ಟು!

ಚುನಾವಣಾ ನೀತಿ ಸಂಹಿತೆ ನಿರ್ವಹಣೆ ವಿಚಾರವಾಗಿ ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ ಉಂಟಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ಚುನಾವಣಾ ನೀತಿ ಸಂಹಿತೆ ನಿರ್ವಹಣೆ ವಿಚಾರವಾಗಿ ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ ಉಂಟಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟಪಡಿಸಿದ್ದಾರೆ. 
ಚುನಾವಣಾ ಆಯೋಗದ ಮೂವರು ಸದಸ್ಯರು ಒಂದೇ ರೀತಿ ಇರುವುದಕ್ಕೆ ಸಾಧ್ಯವಿಲ್ಲ ಎಂದು ಇದೇ ವೇಳೆ ಸುನಿಲ್ ಅರೋರಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ಭಾಷಣಗಳ ವಿರುದ್ಧ ದಾಖಲಾಗಿದ್ದ ಉಲ್ಲಂಘನೆಯ ದೂರುಗಳಿಗೆ  ಆಯೋಗ ಹಲವು ಬಾರಿ ಕ್ಲೀನ್ ಚಿಟ್ ನೀಡಿತ್ತು. ಇದಕ್ಕೆ ಅಶೋಕ್ ಲಾವಸ ವಿರೋಧ ವ್ಯಕ್ತಪಡಿಸಿದ್ದರೂ  ಅದನ್ನು ಪರಿಗಣಿಸಲಾಗಿರಲಿಲ್ಲ. 
ಈ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಷಯವಾಗಿ ನಿರ್ಧರಿಸುವುದಕ್ಕೆ ಆಯೋಗದ ಪೂರ್ಣಪ್ರಮಾಣದ ಸಭೆಗಳಲ್ಲಿ ಭಾಗವಹಿಸುವುದರಿಂದ ದೂರ ಉಳಿಯುವುದಾಗಿ  ಚುನಾವಣಾ ಆಯುಕ್ತ ಅಶೋಕ್ ಲವಾಸ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ನಿರ್ವಹಣೆಯ ವಿಷಯವಾಗಿ  ಚುನಾವಣಾ ಆಯೋಗದಲ್ಲಿ ಬಿರುಕು ಮೂಡಿದೆ ಎಂಬ ವರದಿ ಪ್ರಕಟವಾಗಿತ್ತು. 
ತಮ್ಮ ನಿರ್ಧಾರಗಳನ್ನೂ ಆಯೋಗದ ಆದೇಶಗಳಲ್ಲಿ ಸೇರಿಸುವುದಾದರೆ ಮಾತ್ರ ಸಭೆಗೆ ಹಾಜರಾಗುವುದಾಗಿ ಅಶೋಕ್ ಲವಾಸ ಆಯುಕ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT