ದೇಶ

ಭದ್ರತಾ ಸಿಬ್ಬಂದಿ ಇಂದಿರಾ ಗಾಂಧಿ ರೀತಿ ನನ್ನನ್ನೂ ಹತ್ಯೆ ಮಾಡಬಹುದು: ಕೇಜ್ರಿವಾಲ್

Lingaraj Badiger
ನವದೆಹಲಿ: ಬಿಜೆಪಿ ನನ್ನನ್ನು ಕೊಲೆ ಮಾಡಲು ಷಡ್ಯಂತ್ರ ರೂಪಿಸಿದ್ದು, ನನ್ನ ಭದ್ರತಾ ಸಿಬ್ಬಂದಿಯೇ ಒಂದು ದಿನ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ರೀತಿಯಲ್ಲಿ ನನ್ನನ್ನು ಹತ್ಯೆ ಮಾಡುವ ಸಾಧ್ಯತೆ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ತಮ್ಮನ್ನು ಕೊಲ್ಲಲು ಬಯಸಿದ್ದು, ಭದ್ರತಾ ಸಿಬ್ಬಂದಿಯಿಂದಲೇ ತಮ್ಮ ಹತ್ಯೆಯಾಗುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ತಮ್ಮ ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಬಿಜೆಪಿಗೆ ವರದಿ ಸಲ್ಲಿಸುತ್ತಿದ್ದು, ಅವರಿಂದಲೇ ತಮ್ಮ ಹತ್ಯೆಯ ಸಂಚು ರೂಪಿಸುವ ಸಾಧ್ಯತೆ ಇದೆ ಎಂದು ಕೇಜ್ರಿವಾಲ್ ದೂರಿದ್ದಾರೆ.
ಇತ್ತೀಚಿಗೆ ದೆಹಲಿಯ ಮೋತಿನಗರದಲ್ಲಿ ರೋಡ್ ಶೋ ವೇಳೆ ಕೇಜ್ರಿವಾಲ್ ಗೆ ಯುವಕನೋರ್ವ ಕಪಾಳಮೋಕ್ಷ ಮಾಡಿದ್ದು, ಇದಕ್ಕೆ ಬಿಜೆಪಿಯೇ ಕಾರಣ ಎಂದು ದೆಹಲಿ ಸಿಎಂ ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
SCROLL FOR NEXT