ನಿತೀಶ್ ಕುಮಾರ್ 
ದೇಶ

ಗೋಡ್ಸೆಯ ಸಮರ್ಥಿಸಿಕೊಂಡ ಪ್ರಗ್ಯಾ ಠಾಕೂರ್ ರನ್ನು ಬಿಜೆಪಿಯಿಂದ ವಜಾಗೊಳಿಸಿ: ನಿತೀಶ್ ಕುಮಾರ್

ಪ್ರಗ್ಯಾ ಠಾಕೂರ್ ನಾಥೂರಾಮ್ ಗೋಡ್ಸೆ ಪರ ವಕಾಲತ್ತು ವಹಿಸಿದ್ದು ಆಕ್ಷೇಪಾರ್ಹ ಅಪರಾಧ. ಆಕೆಯನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ

ಪಟ್ಣಾ: ಪ್ರಗ್ಯಾ ಠಾಕೂರ್ ನಾಥೂರಾಮ್ ಗೋಡ್ಸೆ ಪರ ವಕಾಲತ್ತು ವಹಿಸಿದ್ದು ಆಕ್ಷೇಪಾರ್ಹ ಅಪರಾಧ. ಆಕೆಯನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.ಮಾದ್ಯಮದವರು ಕೇಳಿದ್ದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಿಹಾರ ಮುಖ್ಯಂತ್ರಿ ಈ ಅಭಿಪ್ರಾಯ ಕೊಟ್ಟಿದ್ದಾರೆ. 

ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥರಾದ ನಿತೀಶ್ ಕುಮಾರ್ ತಮ್ಮ ಪುತ್ರ ನಿಶಾಂತ್ ಜತೆ ಸೇರಿ ಪಟ್ನಾ ಸಾಹೇಬ್ ಲೋಕಸಭಾ ಕ್ಷೇತ್ರದ ದಿಘಾ ಅಸೆಂಬ್ಲಿ ವ್ಯಾಪ್ತಿಯ ರಾಜ್ ಭವನ್ ವಸತಿ ಪ್ರದೇಶದ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದೇ ಮೊದಲ ಬಾರಿಗೆ ನಿತೀಶ್ ಕುಮಾರ್ ಪಟ್ನಾದಲ್ಲಿ ಪುತ್ರನೊಡನೆ ಮತ ಚಲಾಯಿಸಿದ್ದು 2014ರವರೆಗೂ ಅವರು ತಮ್ಮ ಹುಟ್ಟೂರಾದ ಭಕತಿಯಾರ್ ಪುರ್ ನಲ್ಲಿಯೇ ಮತದಾನ ಮಾಡುತ್ತಿದ್ದರು.

ಇಂದು ಅವರು ಮಧ್ಯ ವಿದ್ಯಾಲಯದ 326 ಸಂಖ್ಯೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ಮತದಾನದ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ನಿತೀಶ್ ಕುಮಾರ್ ಚುನಾವಣೆ ಅವಧಿ ಸುದೀರ್ಘವಾಗಿರಬಾರದು ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಜನತೆ ದೇಶದ ಭವಿಷ್ಯವನ್ನು ಬುದ್ದಿವಂತಿಕೆಯಿಂದ ತೀರ್ಮಾನಿಸಲಿದ್ದಾರೆ ಎಂದೂ ಹೇಳಿದ್ದಾರೆ.

ಎರಡು ಹಂತಗಳ ನಡುವೆ ದೊಡ್ಡ ಅಂತರವಿರುವುದು ಒಳ್ಳೆಯದಲ್ಲ ಎಂದು ಅಭಿಪ್ರಾಯಪಟ್ಟ ಬಿಹಾರ ಸಿಎಂ ಮುಂದಿನ ದಿನದಲ್ಲಿ ಈ ರೀತಿಯಾಗದಂತೆ ಗಮನಿಸಬೇಕು. ಇದಕ್ಕಾಗಿ ಚುನಾವಣಾ ಆಯೋಗಕ್ಕೆ ಎಲ್ಲಾ ಪಕ್ಷಗಳೂ ಒಟ್ಟಾಗಿ ಮನವಿ ಪತ್ರ ಸಲ್ಲಿಸಲು ಕರೆ ನೀಡಿದ್ದಾರೆ. ,ಅತದಾರರ ಅನುಕೂಲಕ್ಕಾಗಿ ಚುನಾವಣೆಯನ್ನು ಶೀಘ್ರವೇ ಮುಗಿಸಬೇಕು ಎಂದು ಅವರು ಹೇಳಿದರು.

ಇನ್ನೊಂದೆಡೆ ಬಿಜೆಪಿ ನಾಯಕ, ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸಹ ರಾಜ್ಯದಲ್ಲಿನ ಎರಡು ಹಂತದ ಚುನಾವಣೆ ನಡುವೆ ಕಡಿಮೆ ಅಂತರವಿರಬೇಕು ಎಂದು ಸಲಹೆ ನಿಡಿದ್ದಾರೆ."ನಿಜ ಹೇಳಬೇಕೆಂದರೆ  ಬಿಹಾರ ಬಿಜೆಪಿ ಸಹ ಒಂದು ರಾಷ್ಟ್ರೀಯ ಪಕ್ಷವಾಗಿದ್ದು ರಾಜ್ಯದಲ್ಲಿ ನಾಲ್ಕು ಹಂತಗಳ ಮತದಾನಕ್ಕೆ ಸೂಚಿಸಿದೆ. ಆದರೆ ಎಲ್ಲಾ ತೀರ್ಮಾನವನ್ನೂ ಭಾರತೀಯ ಚುನಾವಣಾ ಆಯೋಗ ತೆಗೆದುಕೊಳ್ಳಲಿದೆ." ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT