ಲೋಕಸಮರ: ಪಶ್ಚಿಮ ಬಂಗಾಲದ ಮತಗಟ್ಟೆ ಸಮೀಪ ಬಾಂಬ್ ಸ್ಪೋಟ, ಟೆಂಸಿ-ಬಿಜೆಪಿ ಕಾರ್ಯಕರ್ತರ ಮಾರಾಮಾರಿ 
ದೇಶ

ಲೋಕಸಮರ: ಪಶ್ಚಿಮ ಬಂಗಾಲದ ಮತಗಟ್ಟೆ ಸಮೀಪ ಬಾಂಬ್ ಸ್ಪೋಟ, ಟಿಎಂಸಿ-ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಲೋಕಸಭೆ ಚುನಾವಣೆಯ ಕಡೇ ಹಂತದ ಮತದಾನ ಭಾನುವಾರ ನಡೆಯುಯುತ್ತಿದ್ದು ಕರ್ನಾಟಕ, ಪಶ್ಚಿಮ ಬಂಗಾಳ ಸೇರಿ ಹಲವು ಕಡೆ ವಿಧಾನಸಭೆಗೆ ಉಪ ಚುನಾವಣೆ ಸಹ ನಡೆಯುತ್ತಿದೆ. ಈ ನಡುವೆ ಬಂಗಾಳದ ಇಸ್ಲಾಂಪುರಿ ಎಂಬಲ್ಲಿ ಮತಗಟ್ಟೆ ಸಮೀಪವೇ ಬಾಂಬ್ ಸ್ಪೋಟವಾಗಿದೆ.

ಕೋಲ್ಕತ್ತಾ: ಲೋಕಸಭೆ ಚುನಾವಣೆಯ ಕಡೇ ಹಂತದ ಮತದಾನ ಭಾನುವಾರ ನಡೆಯುಯುತ್ತಿದ್ದು ಕರ್ನಾಟಕ, ಪಶ್ಚಿಮ ಬಂಗಾಳ ಸೇರಿ ಹಲವು ಕಡೆ ವಿಧಾನಸಭೆಗೆ ಉಪ ಚುನಾವಣೆ ಸಹ ನಡೆಯುತ್ತಿದೆ. ಈ ನಡುವೆ ಬಂಗಾಳದ ಇಸ್ಲಾಂಪುರಿ ಎಂಬಲ್ಲಿ ಮತಗಟ್ಟೆ ಸಮೀಪವೇ ಬಾಂಬ್ ಸ್ಪೋಟವಾಗಿದೆ.
ಬಂಗಾಳದ ಬಸಿರ್ಹಾತ್ ನಲ್ಲಿನ ಮತಗಟ್ಟೆ ಸಂಖ್ಯೆ 189 ರಲ್ಲಿ ಬಾಂಬ್ ಸ್ಪೊಟ ಸಂಭವಿಸಲಿದೆ ಎಂಬ ಬಿಜೆಪಿ ಅಭ್ಯರ್ಥಿಯ ಆರೋಪದ ಹಿನ್ನೆಲೆ ಹೆಚ್ಚುವ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಇಸ್ಲಾಂಪುರಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆ ತೀವ್ರ ಮುನ್ನೆಚ್ಚರಿಕೆ ಕ್ರಮ ಜರುಗಿಸಲಾಗಿದೆ.
ಈ ನಡುವೆ ಬಿಜೆಪಿ ಸಂಸದ ಸಯಂತನ್ ಬಸು ಟಿಎಂಸಿ ಕಾರ್ಯಕರ್ತರು ಸುಮಾರು 100ಕ್ಕೂ ಹೆಚ್ಚು ಮಂದಿಗೆ ಮತದಾನ ಮಾಡಲು ಅವಕಾಶ ನೀಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದಲ್ಲದೆ ಚುನಾವಣೆ ಮುನ್ನಾ ದಿನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗಳು ಸಂಬವಿಸಿದೆ.ಭಟ್ಪರಾ ಪ್ರದೇಶದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ಸಂಭವಿಸಿದೆ. ಈ ವೇಳೆ ಗುಂಡಿನ ದಾಳಿ, ಬಾಂಬ್ ದಾಳಿಗಳೂ ನಡೆದಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಸದ್ಯ ಈ ಪ್ರದೇಶದಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇನ್ನು ಏಳು ಹಂತದ ಚುನಾವಣೆಯ ಅಂತಿಮ ಸುತ್ತಿನಲ್ಲಿ  ಮೊದಲ ಮೂರು ಗಂಟೆಗಳ ಮತದಾನದಲ್ಲಿ ಶೇ. 12ರಷ್ಟು ಮತದಾನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!