ಪ್ರಗ್ಯಾ ಸಿಂಗ್ 
ದೇಶ

ವಿವಾದಾತ್ಮಕ ಹೇಳಿಕೆ ನಂತರ ಪ್ರಗ್ಯಾ ಸಿಂಗ್ ಮೌನವ್ರತ, ಆತ್ಮಾವಲೋಕನ

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿ ವಿವಾದಾಕ್ಕೀಡಾಗಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ...

ಭೋಪಾಲ್‌: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿ ವಿವಾದಾಕ್ಕೀಡಾಗಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಈಗ ಮೌನವ್ರತ ಆಚರಿಸುತ್ತಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಮೇಲೆ ಇದು ಚಿಂತನೆಯ ಸಮಯ ಎಂದಿರುವ ಪ್ರಗ್ಯಾ ಸಿಂಗ್, ನನ್ನ ಹೇಳಿಕೆಗಳಿಂದ ಜನರ ಭಾವನೆಗೆ ಧಕ್ಕೆ ತಂದಿದೆ. ಅದಕ್ಕಾಗಿ ನಾನು ಕ್ಷಮೆ ಕೇಳಿದ್ದೇನೆ. ಈಗ ಆತ್ಮಾವಲೋಕನಕ್ಕಾಗಿ ಮೂರು ದಿನಗಳ ಕಾಲ ಮೌನ ವ್ರತ ಆಚರಿಸುತ್ತಿದ್ದೇನೆ ಎಂದು 
ಟ್ವೀಟ್ ಮಾಡಿದ್ದಾರೆ.
ಮೇ 23ರಂದು ಲೋಕಸಭೆ ಚುವಾವಣೆಯ ಫಲಿತಾಂಶ ಪ್ರಕಟವಾಗುವ ದಿನ ಅಂದರೆ ಗುರುವಾರ ಪ್ರಗ್ಯಾ ಸಿಂಗ್ ಅವರ ಮೌನವ್ರತ ಮುಗಿಯಲಿದೆ.
ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಮ್‌ ಗೋಡ್ಸೆ ದೇಶಭಕ್ತ ಎಂದು ಸಾಧ್ವಿ ಹೇಳಿದ್ದ ಮಾತು ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ತಾನು ಸಾಧ್ವಿ ಅವರನ್ನು ಕ್ಷಮಿಸಲಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT