ಪ್ರಗ್ಯಾ ಸಿಂಗ್ 
ದೇಶ

ವಿವಾದಾತ್ಮಕ ಹೇಳಿಕೆ ನಂತರ ಪ್ರಗ್ಯಾ ಸಿಂಗ್ ಮೌನವ್ರತ, ಆತ್ಮಾವಲೋಕನ

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿ ವಿವಾದಾಕ್ಕೀಡಾಗಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ...

ಭೋಪಾಲ್‌: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿ ವಿವಾದಾಕ್ಕೀಡಾಗಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಈಗ ಮೌನವ್ರತ ಆಚರಿಸುತ್ತಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಮೇಲೆ ಇದು ಚಿಂತನೆಯ ಸಮಯ ಎಂದಿರುವ ಪ್ರಗ್ಯಾ ಸಿಂಗ್, ನನ್ನ ಹೇಳಿಕೆಗಳಿಂದ ಜನರ ಭಾವನೆಗೆ ಧಕ್ಕೆ ತಂದಿದೆ. ಅದಕ್ಕಾಗಿ ನಾನು ಕ್ಷಮೆ ಕೇಳಿದ್ದೇನೆ. ಈಗ ಆತ್ಮಾವಲೋಕನಕ್ಕಾಗಿ ಮೂರು ದಿನಗಳ ಕಾಲ ಮೌನ ವ್ರತ ಆಚರಿಸುತ್ತಿದ್ದೇನೆ ಎಂದು 
ಟ್ವೀಟ್ ಮಾಡಿದ್ದಾರೆ.
ಮೇ 23ರಂದು ಲೋಕಸಭೆ ಚುವಾವಣೆಯ ಫಲಿತಾಂಶ ಪ್ರಕಟವಾಗುವ ದಿನ ಅಂದರೆ ಗುರುವಾರ ಪ್ರಗ್ಯಾ ಸಿಂಗ್ ಅವರ ಮೌನವ್ರತ ಮುಗಿಯಲಿದೆ.
ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಮ್‌ ಗೋಡ್ಸೆ ದೇಶಭಕ್ತ ಎಂದು ಸಾಧ್ವಿ ಹೇಳಿದ್ದ ಮಾತು ವ್ಯಾಪಕ ಟೀಕೆ, ಖಂಡನೆಗೆ ಗುರಿಯಾಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ತಾನು ಸಾಧ್ವಿ ಅವರನ್ನು ಕ್ಷಮಿಸಲಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

ಎಂ.ಎಸ್. ಧೋನಿ ಸಿಎಸ್ ಕೆ ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; ‘ಅನಿವಾರ್ಯ ಕಾರಣ’ ಎಂದ ವಿವಿ

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!