ಸಂಗ್ರಹ ಚಿತ್ರ 
ದೇಶ

ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ತೇಜಸ್ವಿ ಸೂರ್ಯ ಬಹಿರಂಗ ಸವಾಲು!

ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗವಾದ ಬೆನ್ನಲ್ಲೇ ಮತ್ತೆ ಮತಯಂತ್ರಗಳ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಉದ್ಭವಿಸಿದ್ದು, ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬಹಿರಂಗ ಸವಾಲೆಸೆದಿದ್ದಾರೆ.

ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗವಾದ ಬೆನ್ನಲ್ಲೇ ಮತ್ತೆ ಮತಯಂತ್ರಗಳ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಉದ್ಭವಿಸಿದ್ದು, ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬಹಿರಂಗ ಸವಾಲೆಸೆದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಜನ ಪ್ರತಿನಿಧಿಗಳು ಅದೇ ಇವಿಎಂಗಳ ಮೂಲಕವೇ ಗೆದ್ದು ಬಂದವರಾಗಿದ್ದಾರೆ. ಹೀಗಾಗಿ ಅವರು ಇವಿಎಂ ಸರಿಯಿಲ್ಲ ಎಂದು ಹೇಳಿ ತಮ್ಮ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಖಾಸಗಿ ವಾಹಿನಿಯ ಚರ್ಚಾ ಕಾರ್ಯಕ್ರಮದಲ್ಲೂ ಕುರಿತಂತೆ ಕಿಡಿಕಾರಿರುವ ತೇಜಸ್ವಿ ಸೂರ್ಯ, ಫಲಿತಾಂಶ ಬಿಜೆಪಿ ಪರ ಬಂದರೆ ಇವರು ಮತಯಂತ್ರಗಳು ಸರಿಇಲ್ಲ ಎಂದು ಬೊಬ್ಬೆ ಇಡುತ್ತಾರೆ. ಅದೇ ಮಧ್ಯ ಪ್ರದೇಶದಲ್ಲಿ, ಆಂಧ್ರ ಪ್ರದೇಶದಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದಾಗ ಇದೇ ಇವಿಎಂಗಳ ವಿಶ್ವಾಸಾರ್ಹತೆ ಕುರಿತು ಚಕಾರವೆತ್ತುವುದಿಲ್ಲ. ಫಲಿತಾಂಶ ತಮ್ಮ ಪರವಾಗಿ ಬಾರದಿದ್ದರೆ ಮಾತ್ರ ಇವಿಎಂಗಳು ಸರಿ ಇಲ್ಲ ಎನ್ನುತ್ತಾರೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT