ಸಂಗ್ರಹ ಚಿತ್ರ 
ದೇಶ

ಫಲಿತಾಂಶಕ್ಕೆ ಕ್ಷಣಗಣನೆ, ಸಂಭಾವ್ಯ ಹಿಂಸಾಚಾರ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಹೈ ಅಲರ್ಟ್

ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸಂಭ್ಯಾವ್ಯ ಹಿಂಸಾಚಾರದ ಕುರಿತು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದೆ.

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸಂಭ್ಯಾವ್ಯ ಹಿಂಸಾಚಾರದ ಕುರಿತು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದೆ.
ಈಗಾಗಲೇ ಇವಿಎಂಗಳ ಕುರಿತಂತೆ ವಿಪಕ್ಷ ಮುಖಂಡರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ಹೊಂದಿದ್ದು, ಇದರ ನಡುವೆಯೇ ಕೆಲ ನಾಯಕರು ನೀಡಿರುವ ಹೇಳಿಕೆ ಫಲಿತಾಂಶದ ಬಳಿಕ ಹಿಂಸಾಚಾರ ನಡೆಯುವ ಕುರಿತು ಶಂಕೆ ಮೂಡಿಸಿದೆ. ಫಲಿತಾಂಶ ತಮ್ಮ ವಿರುದ್ಧ ಬಂದರೆ ಇವಿಎಂ ತಿರುಚಿರುವುದು ಸ್ಪಷ್ಟವಾದಂತೆ. ಹಾಗೇನಾದರೂ ಆದರೆ ರಕ್ತಪಾತ ಸಂಭವಿಸುತ್ತದೆ ಎಂಬ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ್ ಅವರ ಹೇಳಿಕೆ ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದೆ.
ಈ ಹೇಳಿಕೆ ಬೆನ್ವಲ್ಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಫಲಿತಾಂಶದ ಬಳಿಕ ಉಂಟಾಗಬಹುದಾದ ಹಿಂಸಾಚಾರದ ಕುರಿತುತಂತೆ ಎಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಣೆ ಮಾಡಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶದಲ್ಲಿ ಸಂಭಾವ್ಯ ಹಿಂಸಾಚಾರ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. 
ಇನ್ನು ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಕೆಲ ಶಂಕಿತ ದೂರವಾಣಿ ಕರೆಗಳನ್ನು ಆಲಿಸಿದ್ದು, ಫಲಿತಾಂಶದ ಬೆನ್ನಲ್ಲೇ ಹಿಂಸಾಚಾರಕ್ಕೆ ಕುಮಕ್ಕು ನೀಡುವ ನಿಟ್ಟಿನಲ್ಲಿ ಕೆಲವರು ಮಾತನಾಡಿರುವ ಕುರಿತು ಮಾಹಿತಿ ಕಲೆ ಹಾಕಿದೆ. ಇದೇ ಕಾರಣಕ್ಕೆ ಗೃಹ ಸಚಿವಾಲಯ ಹೈ ಅಲರ್ಟ್ ಘೋಷಣೆ ಮಾಡಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT