ಉದಿತ್ ರಾಜ್ 
ದೇಶ

ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯೇ?: ಕಾಂಗ್ರೆಸ್ ನಾಯಕ ಗಂಭೀರ ಆರೋಪ

"ಎಲ್ಲಾ ವಿವಿಪ್ಯಾಟ್ ಗಳನ್ನೂ ಎಣಿಕೆ ಮಾಡಲು ಸುಪ್ರೀಂ ಕೋರ್ಟ್ ಏಕೆ ಒಪ್ಪಿಕೊಳ್ಳುವುದಿಲ್ಲ? ಹಾಗಾದರೆ ಸರ್ವೋಚ್ಚ ನ್ಯಾಯಾಲಯ ಸಹ ಚುನಾವಣಾ ಅಕ್ರಮಗಳ ಭಾಗವೆ? " ಎಂದು ಕಾಂಗ್ರೆಸ್ ನಾಯಕ....

ನವದೆಹಲಿ: "ಎಲ್ಲಾ ವಿವಿಪ್ಯಾಟ್ ಗಳನ್ನೂ ಎಣಿಕೆ ಮಾಡಲು ಸುಪ್ರೀಂ ಕೋರ್ಟ್ ಏಕೆ ಒಪ್ಪಿಕೊಳ್ಳುವುದಿಲ್ಲ? ಹಾಗಾದರೆ ಸರ್ವೋಚ್ಚ ನ್ಯಾಯಾಲಯ ಸಹ ಚುನಾವಣಾ ಅಕ್ರಮಗಳ ಭಾಗವೆ? " ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸರ್ವೋಚ್ಚ ನ್ಯಾಯಾಲಯದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಲೋಕಸಭೆ ಚುನಾವಣೆಯ ಮತಎಣಿಕೆ ಗುರುವಾರ (ಮೇ 23)ರಂದು ನಡೆಯಲಿದ್ದು ಮತಗಟ್ಟೆ ಸಮೀಕ್ಷೆಗಳು ಹೊರಬಂದ ನಂತರ ಬಹುತೇಕ ವಿಪಕ್ಷಗಳು ಇವಿಎಂ ಬಗೆಗೆ ಅನುಮಾನ ವ್ಯಕ್ತಪಡಿಸಿದೆ. ಇದೀಗ ಕಾಂಗ್ರೆಸ್ ನಾಯಕ ಉದಿತ್ ರಾಜ್ ಇದಕ್ಕೆ ಹೊಸ ಸೇರ್ಪಡೆಯಾಗಿದ್ದಾರೆ. ಆದರೆ ಉದಿತ್ ತಾವು ಸುಪ್ರೀಂ ಕೋರ್ಟ್ ಕುರಿತಂತೆ ಸಂದೇಹ ವ್ಯಕ್ತಪಡಿಸಿರುವುದು ಭಾರೀ ಪ್ರಮಾದಕ್ಕೆ ಎಡೆ ಮಾಡಿದೆ.
ಉದಿತ್ ತಾವು ಟ್ವೀಟ್ ಮೂಲಕ ಸುಪ್ರೀಂ ಕೋರ್ಟ್ ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿದೆಯೆ ಎಂಬ ಪ್ರಶ್ನೆ ಹಾಕಿದ್ದು ತಮ್ಮ ಟ್ವೀಟ್ ನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯ ಕಾರ್ಯದರ್ಶಿ ಪ್ರಿಯಾಂಕಾ ಅವರಿಗೆ ಸಹ ಟ್ಯಾಗ್ ಮಾಡಿದ್ದಾರೆ.
ಮಂಗಳವಾರ ಸುಪ್ರೀಂ ಕೋರ್ಟ್ ಎಲೆಕ್ಟ್ರಾನಿಕ್ ಮತಯಂತ್ರದ ಮತ ಎಣಿಕೆಯೊಂದಿಗೆ ವಿವಿಪ್ಯಾಟ್ ನ 100% ಹೊಂದಾಣಿಕೆ ಪರಿಶೀಲಿಸಬೇಕೆನ್ನುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.
ಈ ಹಿಂದೆ ಮೇ ಮೇ 7ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ 21 ವಿರೋಧ ಪಕ್ಷದ ನಾಯಕರು ಸಲ್ಲಿಸಿದ ವಿವಿಪ್ಯಾಟ್ ಸ್ಲಿಪ್ ಗಳ 50 ಶೇಕಡಾ ತಾಳೆಯನ್ನು ಪರಿಶೀಲಿಸಬೇಕ್ಂಬ ಮನವಿಯನ್ನು ಜೆಐ ನೇತೃತ್ವದ ಮೂರು ನ್ಯಾಯಾಧೀಶರ ಪೀಠವು ತಳ್ಳಿ ಹಾಕಿತ್ತು.  ಇವಿಎಂಗಳೊಂದಿಗಿನ  2% ವಿವಿಪ್ಯಾಟ್ ಸ್ಲಿಪ್ ಗಳ ತಾಳೆಯು ಅಸಮರ್ಪಕವಾಗಿದೆ. ಇದು ನಾಗರಿಕರ ವಿಶ್ವಾಸವನ್ನು ಪ್ರತಿಬಿಂಬಿಸಲಾರದು ಎಂದು ಪ್ರತಿಪಕ್ಷಗಳು ಹೇಳಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ