ಸಂಗ್ರಹ ಚಿತ್ರ 
ದೇಶ

ನೂತನ ಸಂಸದರಿಗೆ ಆರಂಭದಲ್ಲೇ ಶಾಕ್, ಖಾಸಗಿ ಹೊಟೆಲ್ ಬಿಲ್ ಪಾವತಿ ಮಾಡಲ್ಲ ಎಂದ ಲೋಕಸಭಾ ಕಾರ್ಯದರ್ಶಿ

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಹೊಸದಾಗಿ ಆಯ್ಕೆಯಾಗುವ ಸಂಸದರಿಗೆ ಲೋಕಸಭಾ ಕಾರ್ಯದರ್ಶಿಗಳು ಶಾಕ್ ನೀಡಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಹೊಸದಾಗಿ ಆಯ್ಕೆಯಾಗುವ ಸಂಸದರಿಗೆ ಲೋಕಸಭಾ ಕಾರ್ಯದರ್ಶಿಗಳು ಶಾಕ್ ನೀಡಿದ್ದಾರೆ.
ಹೌದು.. ಹಾಲಿ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗುವ ನೂತನ ಸಂಸದರು ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದರೆ ಅಂತಹ ಸಂಸದರ ಹೊಟೆಲ್ ಬಿಲ್ ಅನ್ನು ತಾವು ಪಾವತಿ ಮಾಡುವುದಿಲ್ಲ. ನೂತನ ಸಂಸದರು ಕಡ್ಡಾಯವಾಗಿ ಆಯಾ ರಾಜ್ಯಗಳ ಭವನಗಳು, ವೆಸ್ಚರ್ನ್ ಕೋರ್ಟ್ ಮತ್ತು ಸಂಸದರಗಾಗಿಯೇ ಇರುವ ಹಾಸ್ಟೆಲ್ ಗಳಲ್ಲಿ ತಂಗಬೇಕು ಎಂದು ಹೇಳಿದೆ.
ಈ ಬಗ್ಗೆ ಲೋಕಸಭಾ ಕಾರ್ಯದರ್ಶಿಗಳಾದ ಸ್ನೇಹಲತಾ ಶ್ರೀವಾತ್ಸವ ಅವರು ಬುಧವಾರ ನೂತನ ಆದೇಶ ಹೊರಡಿಸಿದ್ದು, ಹೊಸದಾಗಿ ಆಯ್ಕೆಯಾಗುವ ಲೋಕಸಭಾ ಸದಸ್ಯರು ಖಾಸಗಿ ಹೊಟೆಲ್ ನಲ್ಲಿ ತಂಗುವಂತಿಲ್ಲ. ಒಂದು ವೇಳೆ ತಂಗಿದರೆ ಅಂತಹ ಹೊಟೆಲ್ ಗಳ ಬಿಲ್ ಗಳನ್ನು ಕಾರ್ಯಾಲಯ ಪಾವತಿ ಮಾಡುವುದಿಲ್ಲ, ಸಂಸದರು ಕಡ್ಡಾಯವಾಗಿ ಆಯಾ ರಾಜ್ಯಗಳ ಭವನಗಳು, ವೆಸ್ಚರ್ನ್ ಕೋರ್ಟ್ ಮತ್ತು ಸಂಸದರಗಾಗಿಯೇ ಇರುವ ಹಾಸ್ಟೆಲ್ ಗಳಲ್ಲಿ ತಂಗಬೇಕು ಎಂದು ಹೇಳಿದ್ದಾರೆ.
ನಾಳೆ ಚುನಾವಣಾ ಫಲಿತಾಂಶ ಘೋಷಣೆಯಾಗಲಿದ್ದು, ಫಲಿತಾಂಶ ಘೋಷಣೆ ಬೆನ್ನಲ್ಲೇ ಎಲ್ಲ ಸಂಸದರೂ ದೆಹಲಿಯತ್ತ ಮುಖ ಮಾಡುತ್ತಾರೆ. ಹೀಗಾಗಿ ನೂತನ ಸಂಸದರು ತಂಗಲು ಆಯಾ ರಾಜ್ಯಗಳ ಭವನಗಳಲ್ಲಿ ಮತ್ತು ಹಾಸ್ಟೆಲ್ ಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇನ್ನು ಈ ಹಿಂದೆ ಖಾಸಗಿ ಹೊಟೆಲ್ ಗಳಲ್ಲಿ ತಂಗಿದ್ದ ಸಂಸದರು ಸರ್ಕಾರಕ್ಕೆ ದುಬಾರಿ ಬಿಲ್ ಗಳನ್ನು ನೀಡಿ ಸುದ್ದಿಗೆ ಗ್ರಾಸವಾಗಿದ್ದರು. ಈ ಹಿನ್ನಲೆಯಲ್ಲಿ ಲೋಕಸಭಾ ಕಾರ್ಯಾಲಯ ಈ ನೂತನ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT