ನವದೆಹಲಿ: 17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಗುವ ಸೂಚನೆ ಸಿಕ್ಕಿದ್ದು ಈ ಸಂದರ್ಭದಲ್ಲಿ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಾವೆಲ್ಲರೂ ಒಟ್ಟು ಸೇರಿ ಎಲ್ಲವನ್ನೂ, ಎಲ್ಲರನ್ನೂ ಒಳಗೊಂಡ ಬಲಿಷ್ಠ ಭಾರತವನ್ನು ನಿರ್ಮಿಸೋಣ ಎಂದು ಕರೆ ಕೊಟ್ಟಿದ್ದಾರೆ.
ಮತ್ತೊಮ್ಮೆ ಪ್ರಧಾನಿ ಪಟ್ಟವನ್ನೇರಲು ಸಜ್ಜಾಗಿರುವ ನರೇಂದ್ರ ಮೋದಿ ಟ್ವೀಟ್ ಮಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ನಾವೆಲ್ಲರೂ ಒಟ್ಟಾಗಿ ಬೆಳೆಯೋಣ, ಒಟ್ಟಾಗಿ ಏಳಿಗೆ ಹೊಂದೋಣ, ಬಲಿಷ್ಠ ಭಾರತ ನಿರ್ಮಾಣಕ್ಕೆ ಒಟ್ಟಾಗಿ ಶ್ರಮಿಸೋಣ, ಭಾರತ ಮತ್ತೊಮ್ಮೆ ಜಯ ಗಳಿಸಲಿದೆ, ವಿಜಯೀ ಭಾರತ ಎಂದು ಟ್ವೀಟ್ ಮಾಡಿದ್ದಾರೆ.