ಪ್ರಧಾನಿ ನರೇಂದ್ರ ಮೋದಿ 
ದೇಶ

ಮಹಾಘಟಬಂಧನ್ ಗೆ ಮರ್ಮಾಘಾತ: ಮೋದಿ ಸುನಾಮಿಗೆ ಪ್ರತಿಪಕ್ಷಗಳು ಧೂಳಿಪಟ: ಬಿಜೆಪಿಗೆ ಬಹುಮತ!

2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ಮರುಕಳಿಸಿದ್ದು, ಮಹಾಘಟಬಂಧನ್ ಗೆ ಮರ್ಮಾಘಾತ ಉಂಟಾಗಿದೆ.

ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ಮರುಕಳಿಸಿದ್ದು, ಮಹಾಘಟಬಂಧನ್ ಗೆ ಮರ್ಮಾಘಾತ ಉಂಟಾಗಿದೆ.
ಮಧ್ಯಾಹ್ನ 12:30 ರ ವೇಳೆಗೆ ಮತ ಎಣಿಕೆ ಕಾರ್ಯ ನಿರ್ಣಾಯಕ ಹಂತ ತಲುಪಿದ್ದು, ಚುನಾವಣಾ ಫಲಿತಾಂಶದ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿದೆ. ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಎನ್ ಡಿಎ ಮಧ್ಯಾಹ್ನ 12:30 ರ ವೇಳೆಗೆ 345 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಬಿಜೆಪಿ ಒಂದೇ ಪಕ್ಷ 292 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಕಳೆದ ಬಾರಿಯಂತೆ ಸ್ವತಂತ್ರವಾಗಿ, ಯಾವುದೇ ಬೆಂಬಲ ಇಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವತ್ತ ಹೆಜ್ಜೆ ಹಾಕಿದೆ. 
ಮೋದಿ ವಿರುದ್ಧ ಅಬ್ಬರಿಸಿದ ಕಾಂಗ್ರೆಸ್ ನೇತೃತ್ವದ ಮಹಾಘಬಂಧನ್ ಗೆ ಚುನಾವಣಾ ಫಲಿತಾಂಶದ ಟ್ರೆಂಡ್ ಅಕ್ಷರಶಹ ಮರ್ಮಾಘಾತ ಉಂಟುಮಾಡಿದ್ದು, ಕಾಂಗ್ರೆಸ್ ಪಕ್ಷ ಕೇವಲ 50 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. 
ರಾಜ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ತೀವ್ರ ಮುಖಭಂಗ ಉಂಟಾಗಿದ್ದು, ಕೇವಲ 3 ಸ್ಥಾನಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT