ಅಜಂ ಖಾನ್ 
ದೇಶ

ಒಂದು ವೇಳೆ ಎಲ್ಲಾ ಸಮಾಜದವರೂ ನನಗೆ ಮತ ಹಾಕದಿದ್ದರೆ ರಾಜೀನಾಮೆ: ಅಜಂ ಖಾನ್

ನಿನ್ನೆಯಷ್ಟೇ ಉತ್ತರ ಪ್ರದೇಶದ ರಾಂಪುರ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರು...

ರಾಂಪುರ್: ನಿನ್ನೆಯಷ್ಟೇ ಉತ್ತರ ಪ್ರದೇಶದ ರಾಂಪುರ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರು, ಒಂದು ವೇಳೆ ಎಲ್ಲಾ ಸಮಾಜದಿಂದಲೂ ನನಗೆ ಮತಗಳು ಬರದಿದ್ದರೆ ಮುಂದಿನ ಎಂಟು ದಿನಗಳಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶುಕ್ರವಾರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಜಂ ಖಾನ್, ನನಗೆ ಎಲ್ಲಾ ಸಮಾಜದವರೂ ಮತ ನೀಡಿದ್ದಾರೆ. ಒಂದು ವೇಳೆ ಇದು ಸುಳ್ಳು ಎಂದು ಸಾಬೀತಾದರೆ ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.
ಅರೋಪ- ಪತ್ಯಾರೋಪಗಳ ಮೂಲಕ ದೇಶದ ಗಮನ ಸೆಳೆದಿದ್ದ ರಾಂಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಜಂ ಖಾನ್ ಬಿಜೆಪಿ ಅಭ್ಯರ್ಥಿ ಜಯಪ್ರದಾ ವಿರುದ್ಧ 1 ಲಕ್ಷ 40ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಚುನಾವಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಅಜಂ ಖಾನ್ ಅವರಿಗೆ ಮೂರು ದಿನಗಳ ಕಾಲ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ನಿಷೇಧ ವಿಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT