ಜಗನ್ ಮೋಹನ್ ರೆಡ್ಡಿ 
ದೇಶ

ಆಂಧ್ರಪ್ರದೇಶ: ಚಂದ್ರಬಾಬು ನಾಯ್ಡುಗೆ ದೇವರ ಶಿಕ್ಷೆ - ಜಗನ್ ರೆಡ್ಡಿ

ತೆಲುಗು ದೇಶಂ ಮುಖ್ಯಸ್ಥ ಎನ್ . ಚಂದ್ರಬಾಬು ನಾಯ್ಡು ಅವರ ತಪ್ಪುಗಳಿಗೆ ದೇವರೆ ಶಿಕ್ಷೆ ಕೊಟ್ಟಿದ್ದಾನೆ ಎಂದು ಆಂಧ್ರಪ್ರದೇಶ ಮುಂದಿನ ಮುಖ್ಯಮಂತ್ರಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಅಮರಾವತಿ: ತೆಲುಗು ದೇಶಂ ಮುಖ್ಯಸ್ಥ ಎನ್ . ಚಂದ್ರಬಾಬು ನಾಯ್ಡು ಅವರ ತಪ್ಪುಗಳಿಗೆ ದೇವರೆ ಶಿಕ್ಷೆ ಕೊಟ್ಟಿದ್ದಾನೆ ಎಂದು ಆಂಧ್ರಪ್ರದೇಶ ಮುಂದಿನ ಮುಖ್ಯಮಂತ್ರಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ನೂತನ ಚುನಾಯಿತ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಜಗನ್ ರೆಡ್ಡಿ, ಅನ್ಯಾಯಯುತ, ಅನೈತಿಕವಾಗಿ ರಾಜಕೀಯ ಮಾಡುತ್ತಿದ್ದವರಿಗೆ ದೇವರೆ ಶಿಕ್ಷೆ ನೀಡಿರುವುದು  ಆಂಧ್ರಪ್ರದೇಶ ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದರು.

2014ರ ಚುನಾವಣೆ ಸಂದರ್ಭದಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ 23 ಶಾಸಕರನ್ನು ಚಂದ್ರಬಾಬು ನಾಯ್ಡು ಖರೀದಿಸಿದ್ದರು. ಆದರೆ, ಈಗ ಟಿಡಿಪಿ ಕೇವಲ 23 ಸ್ಥಾನಗಳನ್ನು ಪಡೆದುಕೊಂಡಿದೆ. ಅದು ಮೇ 23 ರಂದೇ ಫಲಿತಾಂಶ ಬಂದಿದೆ. 23ರಲ್ಲಿ ದೇವರು ಸುಂದರ ಲೇಖನ ಬರೆದಿದ್ದಾನೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮೂವರು ಸಂಸದರನ್ನು ಕೂಡಾ ಅಕ್ರಮವಾಗಿ ಚಂದ್ರಬಾಬು ನಾಯ್ಡು ತನ್ನ ಪಕ್ಷಕ್ಕೆ ಸೆಳೆದುಕೊಂಡಿದ್ದರು. ಈಗ ಅವರ ಪಕ್ಷ ಕೇವಲ 3 ಸ್ಥಾನಗಳನ್ನು ಹೊಂದುವಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಆಂಧ್ರ ಪ್ರದೇಶದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ವೈಎಸ್ ಆರ್ ಸಿ ಕಾಂಗ್ರೆಸ್ ಪಕ್ಷ 151 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ತೆಲುಗು ದೇಶಂ ಪಾರ್ಟಿ ಕೇವಲ 23 ಸ್ಥಾನಗಳನ್ನು ಪಡೆದುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ 22 ಸ್ಥಾನ ಪಡೆದಿದ್ದರೆ, ಟಿಡಿಪಿ ಕೇವಲ ಮೂರಕ್ಕೆ ತೃಪ್ತಿಪಟ್ಟುಕೊಂಡಿದೆ.

ಮತ ಹಂಚಿಕೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಶೇ, 50 ರಷ್ಟು ಮತಗಳನ್ನು ಪಡೆದಿದ್ದು, ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಾಗಿದ್ದು, ಉತ್ತಮ ಆಡಳಿತ ನೀಡುವುದಾಗಿ ಜಗನ್ ಮೋಹನ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!