ಕಮಲ್ ನಾಥ್ 
ದೇಶ

ಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಭೋಪಾಲ್: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆಗೆ ಕಮಲ್ ನಾಥ್ರಾಜೀನಾಮೆ ಸಲ್ಲಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ ಎಂದು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಹೇಳಿದರು. ರಾಜ್ಯದಲ್ಲಿ 29 ಸ್ಥಾನಗಳ ಪೈಕಿ 28 ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದು ಚಿಂದ್ವಾರಾ ಕ್ಷೇತ್ರದಲ್ಲಿ ಮಾತ್ರ ಏಕೈಕ ಸ್ಥಾನವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ನಿನ್ನೆ ದೆಹಲಿಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೂ ಸಹ ಕಮಲ್ ನಾಥ್ ಗೈರಾಗಿದ್ದರು.ಮೂಲಗಳ ಪ್ರಕಾರ ತಮ್ಮ ಪಕ್ಷದ ಶಾಸಕರನ್ನು ಒಟ್ತಾಗಿರಿಸಲು ನಾಥ್ ಸಭೆಗೆ ಭಾಗಿಯಾಗದೆ ಕೈಬಿಟ್ಟಿದ್ದರು. 
"ಅವರು ಭೋಪಾಲ್ ನಲ್ಲಿ ಪಕ್ಷದ ಕೆಲಸದಲ್ಲಿ ಬ್ಯುಸಿಯಾಗಿದ್ದ ಕಾರಣ ಅವರು ಸಭೆಗೆ ಹಾಜರಾಗಿಲ್ಲ" ಎಂದು ಕಾಂಗ್ರೆಸ್ ಹೇಳಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಳ ಬಹುಮತದೊಡನೆ ಸರ್ಕಾರ ರಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT