ಕರ್ನಾಟಕ

ದಾವಣಗೆರೆ: ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆ

Nagaraja AB
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ  ನಾಮಪತ್ರ ಸಲ್ಲಿಸಿದರು.
ಸತತವಾಗಿ ಮೂರು ಬಾರಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ ಅವರು ಜಿಲ್ಲಾ ಚುನಾವಣಾಧಿಕಾರಿ ಜಿ. ಎನ್. ಶಿವಮೂರ್ತಿ ಅವರಿಗೆ ಸಿದ್ದೇಶ್ವರ ನಾಮಪತ್ರ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ  ಅಲೆ ಜೊತೆಗೆ ಆರು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಾಸಕರು, ಇಬ್ಬರು ಮಾಜಿ ಶಾಸಕರು ಹಾಗೂ ಸಂಸದನಾಗಿ ಮಾಡಿರುವ ಕೆಲಸಗಳು ಗೆಲುವಿಗೆ ಪೂರಕವಾಗಲಿವೆ.ಜಿಲ್ಲೆಯಲ್ಲಿನ ಯುವ ಮತದಾರರು ಶೇ, 100 ರಷ್ಟು ನರೇಂದ್ರ ಮೋದಿ ಅಭಿಮಾನಿಗಳಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಮತ್ತೊಂದೆಡೆ ಬಾಗಲಕೋಟೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಇಂದು ನಾಮಪತ್ರ ಸಲ್ಲಿಸಿದರು.
SCROLL FOR NEXT