ಹುಬ್ಬಳ್ಳಿ: ಗಂಡು ಮೆಟ್ಟಿದ ನಾಡು ಉತ್ತರ ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಪ್ರಚಾರವನ್ನು ಆರಂಭಿಸಿದ್ದರೆ, ಕಾಂಗ್ರೆಸ್ ನಲ್ಲಿ ಇನ್ನೂ ಸೂಕ್ತ ಅಭ್ಯರ್ಥಿಯ ಅಂತಿಮವಾಗಿಲ್ಲ.
ನಾಮಪತ್ರ ಸಲ್ಲಿಸುವ ಕೊನೆಯ ದಿನದಲ್ಲಿ ಅಭ್ಯರ್ಥಿ ಘೋಷಿಸಿರುವ ಉದಾಹರಣೆ ಕಾಂಗ್ರೆಸ್ ಪಕ್ಷದಲ್ಲಿದ್ದು, ವಿಳಂಬದಿಂದಾಗಿ ಪಕ್ಷದ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ.