ಸಾಂದರ್ಭಿಕ ಚಿತ್ರ 
ಕರ್ನಾಟಕ

ಕೈ ಟಿಕೆಟ್ ಫೈನಲ್: ಧಾರವಾಡದಿಂದ ವಿನಯ್ ಕುಲಕರ್ಣಿ, ದಾವಣಗೆರೆಯಿಂದ ಎಚ್.ಬಿ ಮಂಜಪ್ಪ ಕಣಕ್ಕೆ

ಕಾಂಗ್ರೆಸ್ ನಲ್ಲಿ ತೀವ್ರಗೊಂದಲಕ್ಕೆ ಕಾರಣವಾಗಿದ್ದ ಧಾರವಾಡ ಮತ್ತಿ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕೊನೆಗೂ ಬಗೆಹರಿದಿದೆ....

ಬೆಂಗಳೂರು: ಕಾಂಗ್ರೆಸ್ ನಲ್ಲಿ ತೀವ್ರಗೊಂದಲಕ್ಕೆ ಕಾರಣವಾಗಿದ್ದ ಧಾರವಾಡ ಮತ್ತಿ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕೊನೆಗೂ ಬಗೆಹರಿದಿದೆ.
ಪಕ್ಷದ ನಾಯಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಮಣೆ ಹಾಕಿದ್ದು, ತಡರಾತ್ರಿ ಟಿಕೆಟ್ ಪಟ್ಟಿ ಪ್ರಕಟಿಸಿದೆ. ಕ್ಷೇತ್ರದ ಟಿಕೆಟ್‍ಗಾಗಿ ಶಾಕಿರ್ ಸನದಿ ಹಾಗೂ ವಿಜಯ್ ಕುಲಕರ್ಣಿ ನಡುವೆ ತೀವ್ರ ಪೈಪೋಟಿ ಇತ್ತು. ಆದ್ರೆ ಹೈಕಮಾಂಡ್ ಕುಲಕರ್ಣಿಗೆ ಟಿಕೆಟ್ ನೀಡಿದೆ.
ದಾವಣಗೆರೆ ಕ್ಷೇತ್ರದಲ್ಲಿ ಎಚ್.ಬಿ.ಮಂಜಪ್ಪಗೆ ಟಿಕೆಟ್ ನೀಡಲಾಗಿದ್ದು, ಶ್ಯಾಮನೂರು ತಮ್ಮ ಬೆಂಬಲಿಗನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜಪ್ಪ ಕುರುಬ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದಾರೆ.
ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಶಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಲು ಶಾಮನೂರು ಶಿವಶಂಕರಪ್ಪ ಮತ್ತು ಅವರ ಪುತ್ರ ಎಸ್, ಎಸ್ ಮಲ್ಲಿಕಾರ್ಜುನ ನಿರಾಕರಿಸಿದ್ದರು, ಈ ಹಿನ್ನೆಲೆಯಲ್ಲಿ ಎಚ್.ಬಿ ಮಂಜಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!