ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ ರತ್ನಪ್ರಭ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತವಾಗಿದೆ. ಈ ಬಗ್ಗೆ ಸ್ವತಃ ಬಿಜೆಪಿಯ ಕಲಬುರ್ಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ಅವರು ಮಾಹಿತಿ ನೀಡಿದ್ದು, ಕಲಬುರ್ಗಿಯಲ್ಲಿ ಉಮೇಶ್ ಜಾಧವ್ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇಂದು ಕಲಬುರ್ಗಿಯಲ್ಲಿ ಬೃಹತ್ ರ್ಯಾಲಿ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಜಾಧವ್ ಅವರು, ರ್ಯಾಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ಅಂತೆಯೇ ಇದೇ ಸಂದರ್ಭದಲ್ಲಿ ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಜಾಧವ್ ಮಾಹಿತಿ ನೀಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಸಂಸ್ಥೆ ಜೊತೆ ಕಲಬುರಗಿಯಲ್ಲಿ ಮಾತನಾಡಿರುವ ರತ್ನಪ್ರಭ ಅವರು, ಪ್ರಧಾನಿ ಮೋದಿ ಅವರು ವಿಶಿಷ್ಟ ರೀತಿಯಲ್ಲಿ ದೇಶದ ಅಭಿವೃದ್ದಿ ಮಾಡುತ್ತಿದ್ದಾರೆ. ಹೀಗಾಗಿ ನನಗೆ ವೈಯುಕ್ತಿಕವಾಗಿ ಜನರ ಸೇವೆ ಮಾಡಲು ಬಿಜೆಪಿ ಪಕ್ಷ ಸೂಕ್ತವೆಂದೆನಿಸಿತು. ಹೀಗಾಗಿ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos