ಸಂಗ್ರಹ ಚಿತ್ರ 
ಕರ್ನಾಟಕ

ಬಿಎಸ್ ವೈ ಸಮ್ಮುಖದಲ್ಲಿ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆ!

ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ ರತ್ನಪ್ರಭ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಕೆ ರತ್ನಪ್ರಭ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಈ  ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತವಾಗಿದೆ. ಈ ಬಗ್ಗೆ ಸ್ವತಃ ಬಿಜೆಪಿಯ ಕಲಬುರ್ಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ಅವರು ಮಾಹಿತಿ ನೀಡಿದ್ದು, ಕಲಬುರ್ಗಿಯಲ್ಲಿ ಉಮೇಶ್ ಜಾಧವ್ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇಂದು ಕಲಬುರ್ಗಿಯಲ್ಲಿ ಬೃಹತ್ ರ್ಯಾಲಿ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಜಾಧವ್ ಅವರು, ರ್ಯಾಲಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ಅಂತೆಯೇ ಇದೇ ಸಂದರ್ಭದಲ್ಲಿ ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಜಾಧವ್ ಮಾಹಿತಿ ನೀಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಸಂಸ್ಥೆ ಜೊತೆ ಕಲಬುರಗಿಯಲ್ಲಿ ಮಾತನಾಡಿರುವ ರತ್ನಪ್ರಭ ಅವರು, ಪ್ರಧಾನಿ ಮೋದಿ ಅವರು ವಿಶಿಷ್ಟ ರೀತಿಯಲ್ಲಿ ದೇಶದ ಅಭಿವೃದ್ದಿ ಮಾಡುತ್ತಿದ್ದಾರೆ. ಹೀಗಾಗಿ ನನಗೆ ವೈಯುಕ್ತಿಕವಾಗಿ ಜನರ ಸೇವೆ ಮಾಡಲು ಬಿಜೆಪಿ ಪಕ್ಷ ಸೂಕ್ತವೆಂದೆನಿಸಿತು. ಹೀಗಾಗಿ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT