ಸಂಗ್ರಹ ಚಿತ್ರ 
ಕರ್ನಾಟಕ

ಮತದಾನದ ದಿನ ಕರ್ತವ್ಯ ಮರೆತು ಪ್ರವಾಸಕ್ಕೆ ತೆರಳಿದರೇ ಜೋಕೆ...!

ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಾನಾ ರೀತಿಯ ಕಸರತ್ತು ನಡೆಸುತ್ತಿದ್ದು, ಇದಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ.

ಶಿವಮೊಗ್ಗ: ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಾನಾ ರೀತಿಯ ಕಸರತ್ತು ನಡೆಸುತ್ತಿದ್ದು, ಇದಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ.
ಹೌದು..ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ನಾನಾ ರೀತಿಯ ಹರಸಾಹಸ ಪಡುತ್ತಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ಮತದಾನದ ಪ್ರಮಾಣ ಏರಿಕೆಯಾಗಿಲ್ಲ. ಮತದಾನಕ್ಕಾಗಿ ಸರ್ಕಾರ ರಜೆ ನೀಡಿದರೆ ಹಲವರು ಮತದಾನ ಮಾಡದೇ ಪ್ರವಾಸಕ್ಕೆ ತೆರಳಿ ಮಜಾ ಮಾಡುತ್ತಿದ್ದಾರೆ. ಆ ಮೂಲಕ ತಮ್ಮ ಕರ್ತವ್ಯ ಮರೆಯುತ್ತಿದ್ದಾರೆ. ಹೀಗಾಗಿ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಅಂದು ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಯಾವುದೇ ಹೊಟೆಲ್ ನಲ್ಲೂ ಕೊಠಡಿ ನೀಡದಂತೆ ಹೊಟೆಲ್ ಮತ್ತು ಲಾಡ್ಜ್ ಗಳಿಗೆ ಸೂಚನೆ ನೀಡಿದ್ದಾರೆ.
'ಏಪ್ರಿಲ್ 18 ಹಾಗೂ 23ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ದಿನ ಸಾರ್ವತ್ರಿಕ ರಜೆ ಘೋಷಣೆ ಇರುವುದರಿಂದ ಅನೇಕರು ಮತದಾನ ಮಾಡದೆ ಪ್ರವಾಸ ತೆರಳುತ್ತಾರೆ. ಹೀಗಾದರೆ, ಶೇಕಡಾವಾರು ಮತದಾನ ಕಡಿಮೆಯಾಗಲಿದೆ. ಕೊಠಡಿ ಕಾಯ್ದಿರಿಸಲು ಬರುವ ಪ್ರವಾಸಿಗರ ವೋಟಿಂಗ್​ ಕಾರ್ಡ್​ ಹಾಗೂ ಅವರ ಹಾಗೂ ವಿಳಾಸ ಪರಿಶೀಲಿಸಿ ಎಂದು ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಪ್ರಜಾಪ್ರಭುತ್ವದ ಹಬ್ಬದಂದು ಚುನಾವಣೆಗೆ ಭಾಗವಹಿಸಲು ಅವಕಾಶ ಮಾಡಿ ಕೊಡಿ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಡಿಸಿ ಕೋರಿದ್ದಾರೆ. ಈ ಬಗ್ಗೆ ಹೋಟೆಲ್​, ರೆಸಾರ್ಟ್​ ಅವರಿಗೆ ಸೂಚಿಸಿ ಎಂದು ಜಿಲ್ಲಾ ಕಾರ್ಮಿಕರ ಅಧಿಕಾರಿಗೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT