ದಿನೇಶ್ ಗುಂಡೂರಾವ್ 
ಕರ್ನಾಟಕ

ಸುಮಲತಾ ಪರ ಕಾಂಗ್ರೆಸ್‌ ಧ್ವಜ ಹಿಡಿದರೆ ಕ್ರಮ- ದಿನೇಶ್: ಎಚ್ಚರಿಕೆಗೂ 'ಕೈ' ಕಾರ್ಯಕರ್ತರ ಡೋಂಟ್ ಕೇರ್

ಮಂಡ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತದ ಹೊಗೆಯಾಡುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್‌ ಧ್ವಜ ,...

ಮಂಡ್ಯ: ಮಂಡ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತದ ಹೊಗೆಯಾಡುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜೊತೆಗೆ ಕಾಂಗ್ರೆಸ್‌ ಧ್ವಜ ಹಿಡಿದುಕೊಂಡು ಪ್ರಚಾರ ನಡೆಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.
ಆದರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿರುವ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಸ್ವಾಭಿಮಾನ ಉಳಿಸಿಕೊಳ್ಳಲು ಸುಮಲತಾಗೆ ಬೆಂಬಲ ನೀಡುವುಜದಾಗಿ ಹೇಳಿದ್ದಾರೆ. ಕಾರ್ಯಕರ್ತರಿಂದಲೇ ಪಕ್ಷವೇ ಹೊರತು ನಾಯಕರಿಂದ ಪಕ್ಷವಲ್ಲ , ಕಾರ್ಯಕರ್ತರಿಂದ ಪಕ್ಷ ಮತ್ತು ನಾಯಕರನ್ನು ಉಳಿಸಲು ಮಾಕ್ರ ಸಾಧ್ಯ ಎಂದು ಹೇಳಿರುವ ಕಾರ್ಯಕರ್ತರು ಹಿರಿಯ ಕಾಂಗ್ರೆಸ್ ಮುಖಂಡರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. 
ಇನ್ನೂ ಕೆಪಿಸಿಸಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರ ಎಚ್ಚರಿಕೆಗೆ ಕ್ಯಾರೆ ಅನ್ನದ ಕಾಂಗ್ರೆಸ್ ಕಾರ್ಯಕರ್ತರು ಇಂದು ದರ್ಶನ್ ಪ್ರಚಾರಕ್ಕೆ ಆಗಮಿಸುವ ಗ್ರಾಮಗಳಲ್ಲಿ ಕಾಂಗ್ರೆಸ್ ಭಾವುಟ ಹಿಡಿದು ಸಿದ್ಧರಾಗಿ ನಿಂತಿದ್ದಾರೆ.
ನಾಗಮಂಗಲದ ಹಲವು ಹಳ್ಳಿಗಳಲ್ಲಿ ಎತ್ತಿನ ಬಂಡಿಯಲ್ಲಿ ನಟ ದರ್ಶನ್ ಪ್ರಚರಾ ಮಾಡಲಿದ್ದು, ದರ್ಶನ್ ಸ್ವಾಗತಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಬಾವುಟಗಳು ಎಲ್ಲೆಲ್ಲೂ ರಾರಾಜಿಸುತ್ತಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT