ಕರ್ನಾಟಕ

ಸಿದ್ದರಾಮಯ್ಯ ಭೇಟಿ ಮಾಡಿ ಪ್ರಚಾರಕ್ಕೆ ಆಹ್ವಾನಿಸಿದ ನಿಖಿಲ್​ ಕುಮಾರಸ್ವಾಮಿ

Lingaraj Badiger
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ತಮ್ಮ ಪರ ಪ್ರಚಾರಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.
ಇಂದು ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ ನಿಖಿಲ್ ಅವರು, ತಮ್ಮ ಪರ ಪ್ರಚಾರಕ್ಕೆ ಬರುವಂತೆ ಆಹ್ವಾನ ನೀಡಿದರು. ಇದೇ ವೇಳೆ ಮಂಡ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮಾಜಿ ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು 'ತುಂಬಾ ಆತ್ಮೀಯತೆಯಿಂದ ಮಾತನಾಡಿದರು. ನನ್ನ ಪರವಾಗಿ ಪ್ರಚಾರಕ್ಕೆ ಬರುವಂತೆ ಮನವಿ ಮಾಡಿದೆ. ಏಪ್ರಿಲ್ 12ರಂದು ಮಂಡ್ಯದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ' ಎಂದರು.
ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ನಟರಾದ ದರ್ಶನ್​ ಹಾಗೂ ಯಶ್​ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮಂಡ್ಯ ಚುನಾವಣಾ ಕಣ ರಂಗೇರಿದೆ. ದೋಸ್ತಿ ನಾಯಕರು ಕೂಡ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದು, ಡಿ.ಕೆ.ಶಿವಕುಮಾರ್​ ಹಾಗೂ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಧುಮಕಲಿದ್ದಾರೆ.
SCROLL FOR NEXT