HT Sangliana 
ಕರ್ನಾಟಕ

ಕಾಂಗ್ರೆಸ್ ಗೆ ಎಚ್.ಟಿ ಸಾಂಗ್ಲಿಯಾನ ಗುಡ್ ಬೈ!

ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ಬರೆದಿರುವ ಎಚ್.ಟಿ.ಸಾಂಗ್ಲಿಯಾನ, ಕಳೆದ ಲೋಕಸಭಾ ಅವಧಿಯಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ್ದೇನೆ. ಪಕ್ಷದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯನಾಗಿ ಚುನಾವಣೆ ಪ್ರಚಾರ ಸೇರಿದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರವನ್ನು ಕ್ರೈಸ್ತ ಸಮುದಾಯಕ್ಕೆ ಬಿಟ್ಟುಕೊಡದೆ ಕಾಂಗ್ರೆಸ್ ನಾಯಕರು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ನಾಯಕರು ಹಾಗೂ ಪಕ್ಷದ ಹೈಕಮಾಂಡ್ ಸಹ ಕ್ರೈಸ್ತ ಸಮುದಾಯದ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಸ್ಥಾನ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಮಾಜಿ ಸಂಸದ ಉಲ್ಲೇಖಿಸಿದ್ದಾರೆ.
ಬೆಂಗಳೂರು ಉತ್ತರ ಅಥವಾ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಎಚ್.ಟಿ.ಸಾಂಗ್ಲಿಯಾನ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ್ದ ಅವರು ಪಕ್ಷ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರನಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದರು. ಆದರೆ ಕೊನೆ ಕ್ಷಣದಲ್ಲಿ ನಾಮಪತ್ರ ಸಲ್ಲಿಸದೆ ಸುಮ್ಮನಾಗಿದ್ದರು ಎನ್ನಲಾಗಿದೆ.
ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಕೇಂದ್ರದಲ್ಲಿ ಅಲ್ಪಸಂಖ್ಯಾತ ಮತ್ತು ಕ್ರೈಸ್ತ ಸಮುದಾಯಗಳ ಮತದಾರರ ಸಂಖ್ಯೆ ಹೆಚ್ಚಿದೆ. ಅವರ ದಿಢೀರ್‌ ರಾಜೀನಾಮೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಕ್ರೈಸ್ತ ಸಮುದಾಯದ ಮತಗಳು ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT