ಸಿ ಎಸ್ ಪುಟ್ಟರಾಜು, ಸುಮಲತಾ 
ಕರ್ನಾಟಕ

ಮೈಸೂರಲ್ಲಿ ಹೊಟೇಲ್ ನಿಂದ ಹಣ ಹಂಚುತ್ತಿದ್ದಾರೆ ಎಂಬ ಸಚಿವ ಪುಟ್ಟರಾಜು ಆರೋಪಕ್ಕೆ ಸುಮಲತಾ ಹೇಳಿದ್ದೇನು?

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಎದುರಾಳಿಯಾಗಿ ನಿಂತಿರುವ ಪಕ್ಷೇತರ ...

ಮಂಡ್ಯ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಎದುರಾಳಿಯಾಗಿ ನಿಂತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಮೈಸೂರಿನಲ್ಲಿ ಹೊಟೇಲ್ ನಲ್ಲಿ ಉಳಿದುಕೊಂಡು ಪ್ರಚಾರಕ್ಕೆ ಬರುವವರಿಗೆ ಮತ್ತು ಪ್ರಚಾರದ ವೇಳೆ ಜನರನ್ನು ಸೇರಿಸಲು ಹಣ ಹಂಚುತಿದ್ದಾರೆ ಎಂಬ ಸಚಿವ ಸಿ ಎಸ್ ಪುಟ್ಟರಾಜು ಹೇಳಿಕೆಗೆ ಸುಮಲತಾ ತಿರುಗೇಟು ನೀಡಿದ್ದಾರೆ.
ನಿನ್ನೆ ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆಯಲ್ಲಿ ಪ್ರಚಾರದ ವೇಳೆ ಪ್ರತಿಕ್ರಿಯಿಸಿದ ಸುಮಲತಾ, ಪುಟ್ಟರಾಜು ಅವರು ನಾನು ಹಣ ಹಂಚುತ್ತಿದ್ದೇನೆ ಎಂದು ಗೊತ್ತಿದ್ದರೆ ಕೇಸ್ ಹಾಕಬಹುದು. ಬೆಲೆ ಇರೋರ ಮಾತಿಗೆ ಮಾತ್ರ ನಾನು ಬೆಲೆ ಕೊಡೋದು. ಇಂಥವರ ಮಾತಿಗೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಇದೇ ವೇಳೆ ಐಟಿ ಇಲಾಖೆ ಅಧಿಕಾರಿಗಳು ದೂರವಾಣಿ ಕದ್ದಾಲಿಸಿ ಸುಮಲತಾಗೆ ನೀಡಿದ್ದಾರೆ ಅನ್ನುವ ಸಚಿವ ಪುಟ್ಟರಾಜು ಹೇಳಿಕೆಗೆ ಸಹ ತಿರುಗೇಟು ಕೊಟ್ಟ ಸುಮಲತಾ, ಅವರಿಗೆ ತಾವು ತಪ್ಪು ಮಾಡುತ್ತಿದ್ದೇವೆ, ಸರಿದಾರಿಯಲ್ಲಿ ಹೋಗುತ್ತಿಲ್ಲ ಎನ್ನುವ ಅಪರಾಧ ಪ್ರಜ್ಞೆ ಕಾಡುತ್ತಿದೆ. ತಪ್ಪು ಮಾಡದವರು ಭಯಪಡುವುದಿಲ್ಲ. ಐಟಿಯವರಾದ್ರು ಮಾಡಿಕೊಳ್ಳಲಿ, ಸಿಬಿಐನವರಾದ್ರು ಯಾರು ಏನೇ ಮಾಡಿಕೊಳ್ಳಲಿ ಎಂಬ ಭಾವನೆ ತಪ್ಪು ಮಾಡಿಲ್ಲದಿದ್ದರೆ ಇರುತ್ತದೆ. ಇವರಲ್ಲಿ ಹುಳುಕು ಇಟ್ಟುಕೊಂಡು ಹೀಗೆಲ್ಲ ಮಾಡುತ್ತಿರುವುದು ಎಂದು ಆಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT