ನಟ ದರ್ಶನ್ 
ಕರ್ನಾಟಕ

ಸುಮಲತಾಗೆ ಓಟು ಹಾಕಿದ್ರೆ ಡೈಲಾಗ್ ಹೇಳ್ತಿನಿ: ಅಭಿಮಾನಿಗಳಿಗೆ ದರ್ಶನ್ ಪ್ರೀತಿಯ ಆಫರ್

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಓಟು ಹಾಕಿದರೆ ಡೈಲಾಗ್ ಹೇಳುತ್ತೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ....

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಓಟು ಹಾಕಿದರೆ ಡೈಲಾಗ್ ಹೇಳುತ್ತೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಪ್ರೀತಿಯ ಆಫರ್ ನೀಡಿದ್ದಾರೆ.
ಇಂದು ಕೆಆರ್ ನಗರದಲ್ಲಿ ಸುಮಲತಾ ಪರ ಪ್ರಚಾರ ನಡೆಸುತ್ತಿದ್ದ ದರ್ಶನ್ ಅವರಿಗೆ ಡೈಲಾಗ್ ಹೇಳಿ ಎಂದು ಕೆಲ ಅಭಿಮಾನಿಗಳು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ದರ್ಶನ್, ನೀನು ಡೈಲಾಗ್ ಅಂತಿಯಾ, ಎದುರಿಗೆ ಮಿಡಿಯಾ ಬೇರೆ ಇದೆ. ಅದು ಬೇರೆನೆ ಆಗುತ್ತೆ. ಸರಿ ನೀನು ಸುಮಲತಾಗೆ ಓಟು ಹಾಕ್ತಿನಿ ಅಂದ್ರೆ ನಾನು ಡೈಲಾಗ್ ಹೇಳ್ತಿನಿ ಎಂದರು. ಅಲ್ಲದೆ ಹೇ ಕ್ಯಾಡ್ಬರಿಸ್ ಆನೆ ನಡೆದಿದ್ದೆ ದಾರಿ.... ಬರ್ತಾ ಇದ್ದೀನಿ... ಎಂದು ಡೈಲಾಗ್ ಹೊಡೆದೇ ಬಿಟ್ಟರು... 
ಇಷ್ಟೇ ಸಾಕಪ್ಪ, ಮುಂದೆ ಹೇಳಿದರೆ ಟಾಕ್ ವಾರ್ ಆರಂಭವಾಗುತ್ತೆ ಹೇಳೋಲ್ಲ ಎಂದು ದರ್ಶನ್ ಹೇಳಿದರು.
ಇದಕ್ಕು ಮುನ್ನ ಚಿಕ್ಕನಾಯಕನಹಳ್ಳಿಯಲ್ಲಿ ಅಬ್ಬರದ ಪ್ರಚಾರದ ನಡೆಸಿದ ದರ್ಶನ್, ಪ್ರತಿಯೊಬ್ಬರಿಗೂ ಸ್ವಾಭಿಮಾನ ಎಂಬುದು ಇರುತ್ತದೆ. ಮನೆಯಲ್ಲಿ ಸಾಕಿರುವ ಬೆಕ್ಕಿಗೂ ಸ್ವಾಭಿಮಾನ ಇದೆ. ಕೋಣೆಯಲ್ಲಿ ಕೂಡಿ ಹಾಕಿದರೆ ಅದು ಕತ್ತಿಗೆ ಬಾಯಿ ಹಾಕುತ್ತದೆ. ಅದೇ ರೀತಿ ಎಲ್ಲವನ್ನು ಸಹಿಸಿಕೊಳ್ಳೋಕೆ ಆಗೋಲ್ಲ ಎಂದು ವಿರೋಧಿಗಳಿಗೆ ಎಚ್ಚರಿಕೆ ನೀಡಿದರು.
ಪಶುಪತಿ ಗ್ರಾಮಕ್ಕೂ ಪ್ರವೇಶಿಸಿದ ದರ್ಶನ್​ ಅಲ್ಲಿನ ಮತದಾರರನ್ನು ಉದ್ದೇಶಿಸಿ ಮಾತನಾಡಿ, ಒಂದು ಜೋಡೆತ್ತು ಖರೀದಿಸಲು 1 ಲಕ್ಷ ರೂ. ಬೇಕು. ಹಾಲು ಕೊಡುವ ಹಸು ಕೊಳ್ಳಲು 80 ಸಾವಿರ ಆಗುತ್ತದೆ. ಒಂದು ಕುರಿ ಕೊಳ್ಳಲು 8 ಸಾವಿರ ರೂ. ಬೇಕಾಗುತ್ತದೆ. ಒಂದು ನಾಯಿ ತೆಗೆದುಕೊಳ್ಳಲು 5 ಸಾವಿರ ಬೇಕು. ಹೀಗಾಗಿ ಕೇವಲ 500 ರಿಂದ 2 ಸಾವಿರ ರೂಪಾಯಿಗೆ ಮಾರುಹೋಗಬೇಡಿ, ಸ್ವಾಭಿಮಾನಕ್ಕಾಗಿ ಹಣದ ವಿರುದ್ಧ ನಮ್ಮ ಹೋರಾಟ ಎಂದು ದರ್ಶನ್​ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT