ಜಿ.ಮಾದೇಗೌಡ ಮತ್ತು ಪುಟ್ಟರಾಜು
ಮಂಡ್ಯ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ದಾಖಲಾಗಿದೆ.
ಚುನಾವಣಾ ಖರ್ಚಿಗಾಗಿ ಹಣದ ಬೇಡಿಕೆ ಇಟ್ಟಿದ್ದ ಸಂಬಂಧ ಚುನಾವಣಾಧಿಕಾರಿ ಜಗದೀಶ್ ದೂರು ಆಧರಿಸಿ ಐಪಿಸಿ ಸೆಕ್ಷನ್ 171(ಇ)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ಚುನಾವಣಾ ಆಯೋಗಕ್ಕೆ ವರ್ಗಾಯಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ವ್ಯಕ್ತಪಡಿಸಿರುವ ಜಿ.ಮಾದೇಗೌಡ, ವ್ಯಕ್ತಿಯೊಬ್ಬರ ಮೊಬೈಲ್ ನಿಂದ ಸಚಿವರ ಮೊಬೈಲ್ಗೆ ಕರೆ ಮಾಡಿಸಿ ಚುನಾವಣೆ ಮಾಡಲು ಹಣ ಕಳಿಸಿಕೊಡುವಂತೆ ಸೂಚಿಸಿದ್ದಾರೆ. ಅದಕ್ಕೆ ಸಚಿವರು ಹಣದ ವ್ಯವಸ್ಥೆ ಮಾಡುವುದಾಗಿ ಉತ್ತರಿಸಿದ್ದರು.
ಈ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಈಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆರ್.ಟಿ.ಐ. ಕಾರ್ಯಕರ್ತ ರವೀಂದ್ರ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು. ಇವರ ದೂರನ್ನು ಆಧರಿಸಿ ಚುನಾವಣಾಧಿಕಾರಿಗಳು ಪೊಲೀಸ್ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos