ಮಾಯಾವತಿ 
ಕರ್ನಾಟಕ

ಮೈಸೂರು: ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ- ಮಾಯಾವತಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಮೈಸೂರು:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ.

ಮಹಾರಾಜ ಕಾಲೇಜು ಮೈದಾನದಲ್ಲಿ 'ಆನೆ ನಡಿಗೆ ಸಂಸತ್  ಕಡೆಗೆ' ಎಂಬ ಹೆಸರಿನಲ್ಲಿ ಆಯೋಜಿಸಿದ್ದ  ಬಿಎಸ್ ಪಿ ಸಮಾವೇಶದಲ್ಲಿ ಮಾತನಾಡಿದ ಅವರು, 2014 ರ ಚುನಾವಣೆಯಲ್ಲಿ 80 ಕ್ಷೇತ್ರಗಳಲ್ಲಿ 71 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಿಜೆಪಿ ಈ ಬಾರಿ  ಬಿಎಸ್ಪಿ- ಎಸ್ಪಿ - ಆರ್ ಎಲ್ ಡಿ ಮೈತ್ರಿಯಿಂದಾಗಿ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು.

ಭಾಷಣದ ಪೂರ್ಣವಧಿ ಸಮಯವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಟೀಕಿಸಲು ಮುಡಿಪಾಟ್ಟ ಮಾಯಾವತಿ, ಬಿಜೆಪಿಯ ಚೌಕಿದಾರ್ ಹಾಗೂ ಕಾಂಗ್ರೆಸ್ ನ ನ್ಯಾಯ್ ಕನಿಷ್ಠ ಆದಾಯ ಯೋಜನೆ ಬಗ್ಗೆ ವ್ಯಂಗ್ಯವಾಡಿದರು. ಕಾಂಗ್ರೆಸ್ , ಬಿಜೆಪಿ ಹಲವಾರು ವರ್ಷ ದೇಶ ಆಳಿವೆ. ಆದರೆ, ಬಡತನ ನಿರ್ಮೂಲನೆ ಮಾಡಲು ಈ ಪಕ್ಷಗಳಿಂದ ಸಾಧ್ಯವಾಗಿಲ್ಲ. ಉದ್ಯೋಗದಿಂದ ಮಾತ್ರ ಬಡತನ ನಿರ್ಮೂಲನೆ  ಸಾಧ್ಯ.  ಬಿಎಸ್ ಪಿ ಅಧಿಕಾರಕ್ಕೆ ಬಂದರೆ  ಪ್ರತಿ ಬಡ ಕುಟುಂಬದ ಒಬ್ಬರಿಗೆ ಸರ್ಕಾರಿ ಸಂಸ್ಥೆಗಳಲ್ಲಿ ಉದ್ಯೋಗ ನೀಡುತ್ತೇವೆ ಎಂದರು.

 ಬಿಜೆಪಿ ಇಡಿ, ಸಿಬಿಐ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.ವಿಪಕ್ಷಗಳ ನಾಯಕರ ಮನೆಗಳ ಮೇಲೆ ದಾಳಿ ನಡೆಸುತ್ತಿದೆ. ಭ್ರಷ್ಟಚಾರ ಪ್ರತಿ ಹಂತದಲ್ಲಿ ತಾಂಡವವಾಡುತ್ತಿದೆ. ಹಿಂದೆ ಕಾಂಗ್ರೆಸ್ ಸರ್ಕಾರ ಬೊಪೋರ್ಸ್  ಹಗರಣದಲ್ಲಿ ಈಗ ಬಿಜೆಪಿ ಸರ್ಕಾರ ರಫೇಲ್ ಹಗರಣದಲ್ಲಿ ಮುಳುಗಿವೆ ಎಂದು ದೂರಿದರು.

 ಕರ್ನಾಟಕದಲ್ಲಿ  ಬಿಎಸ್ಪಿ ಪಕ್ಷದ ಎನ್  ಮಹೇಶ್ ಅವರನ್ನು ಕೊಳ್ಳೇಗಾಲದಿಂದ ಆರಿಸಿ ಶಾಸಕರನ್ನಾಗಿ ಮಾಡಿದ್ದೀರಿ. ಸಚಿವರೂ ಆಗಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಮರ್ಥ್ಯವನ್ನು ಬಿಎಸ್ ಪಿ ಹೊಂದಿದೆ ಎಂದು ಮಾಯಾವತಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT