ಕೆ. ರತ್ನಪ್ರಭಾ 
ಕರ್ನಾಟಕ

ಕಾಂಗ್ರೆಸ್, ಜೆಡಿಎಸ್ ನಾಯಕರು ದಲಿತ ದ್ವೇಷಿಗಳು: ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ

ರಾಜ್ಯದ ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ದಲಿತರನ್ನು ಕಡೆಗಣಿಸಿದೆ, ಅಲ್ಲದೆ ಎರಡೂ ಪಕ್ಷದವರಿಗೆ ದಲಿತರ ಬಗೆಗೆ ದ್ವೇಷವಿದೆ ಎಂದು ಕರ್ನಾಟಕ ರಾಜ್ಯ.....

ಕಲಬುರ್ಗಿ: ರಾಜ್ಯದ ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ದಲಿತರನ್ನು ಕಡೆಗಣಿಸಿದೆ, ಅಲ್ಲದೆ ಎರಡೂ ಪಕ್ಷದವರಿಗೆ ದಲಿತರ ಬಗೆಗೆ ದ್ವೇಷವಿದೆ ಎಂದು ಕರ್ನಾಟಕ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾದ ಕೆ. ರತ್ನಪ್ರಭಾ ಹೇಳಿದ್ದಾರೆ. ಅಲ್ಲದೆ ತಾನೋರ್ವ ದಲಿತಳೆನ್ನುವ ಕಾರಣಕ್ಕೇ ನನ್ನನ್ನು ತುಳಿಯಲಾಗಿತ್ತು ಎಂದು ಅವರು ಸರ್ಜಾರದ ವಿರುದ್ಧ ಗಂಭೀರ ಆರೊಪ ಮಾಡಿದ್ದಾರೆ.
ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮುಧೋಳದಲ್ಲಿ ಬಿಜೆಪಿಯ ದಲಿತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರತ್ನಪ್ರಭಾ "ರಾಜ್ಯದಲ್ಲಿನ ಸರ್ಕಾರ ದಲಿತರ ಪರ ಕೇವಲ ತೋರಿಕೆಯ ರಾಜಕಾರಣ ಮಾಡುತ್ತಾ ಬಂದಿದೆ ನಾನೊಬ್ಬ ದಲಿತೆ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ತುಳಿಯಲಾಗಿದೆ, 2014ರಲ್ಲೇ ನಾನು ಮುಖ್ಯ ಕಾರ್ಯದರ್ಶಿಯಾಗಬೇಕಾಗಿತ್ತು. ಆದರೆ ನನಗೆ ಮೋಸ ಮಾಡಲಾಗಿದೆ, ಕಾಟಾಚಾರಕ್ಕೆ ಎಂಬಂತೆ ಚುನಾವಣೆಗೆ ನಾಲ್ಕು ತಿಂಗಳಿದೆ ಎನ್ನುವಾಗ ನನ್ನನ್ನು ಸಿಎಸ್ ಸ್ಥಾನದಲ್ಲಿ ಕೂರಿಸಲಾಗಿತ್ತು" ಅವರು ಹೇಳಿದ್ದಾರೆ.
ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರತ್ನಪ್ರಭಾ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳ ನಾಯಕರಿಗೆ ದಲಿತರ ವಿರುದ್ಧ ದ್ವೇಷವಿದೆ ಎಂದು ಹೇಳಿದ್ದಾರೆ.ಅಲ್ಲದೆ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸಿತ್ತು ಎಂದೂ ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT