ಕೆ. ರತ್ನಪ್ರಭಾ 
ಕರ್ನಾಟಕ

ಕಾಂಗ್ರೆಸ್, ಜೆಡಿಎಸ್ ನಾಯಕರು ದಲಿತ ದ್ವೇಷಿಗಳು: ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ

ರಾಜ್ಯದ ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ದಲಿತರನ್ನು ಕಡೆಗಣಿಸಿದೆ, ಅಲ್ಲದೆ ಎರಡೂ ಪಕ್ಷದವರಿಗೆ ದಲಿತರ ಬಗೆಗೆ ದ್ವೇಷವಿದೆ ಎಂದು ಕರ್ನಾಟಕ ರಾಜ್ಯ.....

ಕಲಬುರ್ಗಿ: ರಾಜ್ಯದ ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ದಲಿತರನ್ನು ಕಡೆಗಣಿಸಿದೆ, ಅಲ್ಲದೆ ಎರಡೂ ಪಕ್ಷದವರಿಗೆ ದಲಿತರ ಬಗೆಗೆ ದ್ವೇಷವಿದೆ ಎಂದು ಕರ್ನಾಟಕ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾದ ಕೆ. ರತ್ನಪ್ರಭಾ ಹೇಳಿದ್ದಾರೆ. ಅಲ್ಲದೆ ತಾನೋರ್ವ ದಲಿತಳೆನ್ನುವ ಕಾರಣಕ್ಕೇ ನನ್ನನ್ನು ತುಳಿಯಲಾಗಿತ್ತು ಎಂದು ಅವರು ಸರ್ಜಾರದ ವಿರುದ್ಧ ಗಂಭೀರ ಆರೊಪ ಮಾಡಿದ್ದಾರೆ.
ಕಲಬುರಗಿ ಜಿಲ್ಲೆ ಸೇಡಂ ತಾಲೂಕು ಮುಧೋಳದಲ್ಲಿ ಬಿಜೆಪಿಯ ದಲಿತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರತ್ನಪ್ರಭಾ "ರಾಜ್ಯದಲ್ಲಿನ ಸರ್ಕಾರ ದಲಿತರ ಪರ ಕೇವಲ ತೋರಿಕೆಯ ರಾಜಕಾರಣ ಮಾಡುತ್ತಾ ಬಂದಿದೆ ನಾನೊಬ್ಬ ದಲಿತೆ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ತುಳಿಯಲಾಗಿದೆ, 2014ರಲ್ಲೇ ನಾನು ಮುಖ್ಯ ಕಾರ್ಯದರ್ಶಿಯಾಗಬೇಕಾಗಿತ್ತು. ಆದರೆ ನನಗೆ ಮೋಸ ಮಾಡಲಾಗಿದೆ, ಕಾಟಾಚಾರಕ್ಕೆ ಎಂಬಂತೆ ಚುನಾವಣೆಗೆ ನಾಲ್ಕು ತಿಂಗಳಿದೆ ಎನ್ನುವಾಗ ನನ್ನನ್ನು ಸಿಎಸ್ ಸ್ಥಾನದಲ್ಲಿ ಕೂರಿಸಲಾಗಿತ್ತು" ಅವರು ಹೇಳಿದ್ದಾರೆ.
ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರತ್ನಪ್ರಭಾ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳ ನಾಯಕರಿಗೆ ದಲಿತರ ವಿರುದ್ಧ ದ್ವೇಷವಿದೆ ಎಂದು ಹೇಳಿದ್ದಾರೆ.ಅಲ್ಲದೆ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸಿತ್ತು ಎಂದೂ ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT