ವಿಜಯಪುರ ಶುದ್ದಿಗೋಷ್ಟಿಯಲ್ಲಿ ಉಪೇಂದ್ರ 
ಕರ್ನಾಟಕ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ: ನಟ ಉಪೇಂದ್ರ ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಘೋಷಣೆ ಮಾಡಿದ್ದಾರೆ.

ವಿಜಯಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಘೋಷಣೆ ಮಾಡಿದ್ದಾರೆ.
ವಿಜಯಪುರ ಎಸ್.ಸಿ ಮೀಸಲು ಕ್ಷೇತ್ರದ ಲೋಕಸಭೆಯ ಪ್ರಜಾಕೀಯ ಅಭ್ಯರ್ಥಿ ಗುರುಬಸವ ರಬಕವಿ ಪರ ಪ್ರಚಾರಕ್ಕೆ ಇಂದು ನಟ, ಪಕ್ಷದ ಸ್ಥಾಪಕ ಉಪೇಂದ್ರ ಆಗಮಿಸಿದ್ದರು. ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದರು. 
ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಪೇಂದ್ರ, 'ಹಣ, ಹೆಂಡ ಹಂಚಿ ಹುಚ್ಚತನ ಮಾಡೋ‌ ಬದಲು ನಮ್ಮ ಪ್ರಜಾಕೀಯ ತತ್ವವೇ ಸರಿ ಇದೆ ಎಂದು ಹೇಳಿದರು. ಇದೇ ವೇಳೆ ತಾವು ಉತ್ತಮ ಪ್ರಜಾಕೀಯ ಪಕ್ಷದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉಪೇಂದ್ರ ಘೋಷಣೆ ಮಾಡಿದರು.
'ನಾನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ಬಾರಿ ಎಲ್ಲರನ್ನೂ ತಯಾರು ಮಾಡಿ ನಿಲ್ಲಿಸುವ ಕೆಲಸ ಜಾಸ್ತಿ ಇದ್ದಿದ್ದರಿಂದ ನಾನು ಈ ಬಾರಿ ಸ್ಪರ್ಧಿಸಿಲ್ಲ. ಪ್ರಜಾಕೀಯದಲ್ಲಿ ಹೆಸರು, ಹಣ, ಜಾತಿ ಯಾವುದೂ ಮುಖ್ಯವಾಗಲ್ಲ. ರಾಜರಿಂದ ಪ್ರಜೆಗಳಿಗೆ ಕೀ ಕೊಡುವ ಕೆಲಸ ಪ್ರಜಾಕೀಯ ಮಾಡಲಿದೆ. ಐದು ವರ್ಷಗಳ‌ ಕಾಲ ಅಧಿಕಾರ ಪ್ರಜೆಗಳ ಬಳಿಯೇ ಇರಲಿದೆ. ರಾಜ್ಯದಲ್ಲಿ 27 ಕಡೆಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಾಗಿದೆ. ಪ್ರಜಾಕೀಯಕ್ಕೆ ಸಾಕಷ್ಟು ಯುವಕರು ಬೆಂಬಲ‌ ನೀಡುತ್ತಿದ್ದಾರೆ. ಈಗಿರುವ ರಾಜಕೀಯವನ್ನು ತಳಮಟ್ಟದಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ‌ ಮೇಲ್ಭಾಗದಿಂದ ಬದಲಾವಣೆ ಮಾಡಲು ಹೊರಟಿದ್ದೇವೆ ಎಂದು ಉಪೇಂದ್ರ ಹೇಳಿದರು.
ಅಂತೆಯೇ 'ಸಾಧ್ಯವಾದ ಕಡೆಗಳಲ್ಲಿ ಪ್ರಚಾರ ಮಾಡ್ತಿದ್ದೇವೆ. ಇದುವರೆಗೂ ಎಲ್ಲರೂ ಹಣ, ಹೆಂಡ ತೋರಿಸಿಕೊಂಡೆ ಬರುತ್ತಿದ್ದಾರೆ. ಈ ಬಾರಿ ಜನ ನಮಗೆ ಎಷ್ಟು ಸಹಕಾರ ನೀಡುತ್ತಾರೆ ನೊಡೋಣ. ಪ್ರಜಾಕೀಯದಲ್ಲಿ ಪ್ರಜೆಗಳೆ ಪ್ರಭುಗಳು. ಜನಗಳಿಗ ಏನು ಬೇಕು ಅಂತಾ ಮಾತಾಡಿದ್ರೆ ಅದನ್ನು ಹುಚ್ಚತನ ಅನ್ನೋದಾದ್ರೆ ಅದೇ ಹುಚ್ಚುತನ ನಮಗೆ ಬೇಕು. ಹಣ, ಹೆಂಡ ಹಂಚಿ ಹುಚ್ಚತನ ಮಾಡೋ‌ ಬದಲು ನಮ್ಮ ತತ್ವವೇ ಸರಿ ಇದೆ. ನಮ್ಮ ಅಭ್ಯರ್ಥಿಗಳು ಗೆದ್ದಲ್ಲಿ, ಸ್ವಂತ ನಿರ್ಧಾರ ತಗೋಳೋದಿಲ್ಲ. ಜನರ ಬಳಿ ಬಂದು ಕೇಳ್ತೆವೆ, ಅವರು ಹೇಳಿದ ಪಾರ್ಟಿಗೆ ಬೆಂಬಲ ಕೊಡುತ್ತೇವೆ ಎಂದು ಉಪೇಂದ್ರ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

EVM ಬದಲು ಬ್ಯಾಲಟ್ ಪೇಪರ್ ಬಳಕೆಗೆ ನಿರ್ಧಾರ: ಸರ್ಕಾರದ ವಿರುದ್ಧ BJP ವಾಗ್ದಾಳಿ, ನಮ್ಮ ಅನುಭವದ ಮೇಲೆ ತೀರ್ಮಾನಿಸಿದ್ದೇವೆಂದ ಸಿಎಂ ಸಿದ್ದರಾಮಯ್ಯ

ಇಸ್ಲಾಂ ಎಂದರೆ ಶಾಂತಿ, ಬಸವಣ್ಣರಂತೆ ಪ್ರವಾದಿಗಳು ಕೆಲಸ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್

'ಇಸ್ಲಾಂಗೆ ವಿರುದ್ಧ': ದರ್ಗಾದ ಫಲಕದಲ್ಲಿನ ಅಶೋಕ ಲಾಂಛನ ವಿರೂಪಗೊಳಿಸಿದ ಸ್ಥಳೀಯರು!: Video

ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ: ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

SCROLL FOR NEXT