ಎಚ್ ಡಿ ಕುಮಾರಸ್ವಾಮಿ 
ಕರ್ನಾಟಕ

ದೇವೇಗೌಡರ ಮನೆದೇವರ ಮೇಲೆ ಐಟಿ ದಾಳಿ: ಆ ಈಶ್ವರ ಬಿಜೆಪಿಯನ್ನು ಧೂಳೀಪಟ ಮಾಡುತ್ತಾನೆ; ಸಿಎಂ

ಶಿವನ ಅರ್ಚಕರ ಮನೆ ಮೇಲೂ ಐಟಿ ದಾಳಿ ಮಾಡಿಸಿದ್ದಾರೆ. ಆ ಈಶ್ವರ ಬಿಜೆಪಿಯನ್ನು ಧೂಳೀಪಟ ಮಾಡುತ್ತಾನೆ ಎಂದು ಮುಖ್ಯಮಂತ್ರಿ ಎಚ್ ಡಿ...

ತುಮಕೂರು: ಶಿವನ ಅರ್ಚಕರ ಮನೆ ಮೇಲೂ ಐಟಿ ದಾಳಿ ಮಾಡಿಸಿದ್ದಾರೆ. ಆ ಈಶ್ವರ ಬಿಜೆಪಿಯನ್ನು ಧೂಳೀಪಟ ಮಾಡುತ್ತಾನೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಐಟಿ ದಾಳಿ ವಿರುದ್ಧ ಶುಕ್ರವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಗೌಡರ ಕುಟುಂಬದ ದೇವರು ಹರದನಹಳ್ಳಿ ಈಶ್ವರ ದೇಗುಲದ ಮೇಲೆ ಹಾಗೂ ದೇವಾಲಯದ ಅರ್ಚಕ ಪ್ರಕಾಶ್ ಭಟ್ ಅವರ ಮನೆ ಮೇಲಿನ ದಾಳಿ ಖಂಡಿಸಿದ ಸಿಎಂ, ಐಟಿ ಇಲಾಖೆಯನ್ನು ಬಿಜೆಪಿಯ ಇಲಾಖೆ ಎಂದು ಟೀಕಿಸಿದ್ದಾರೆ. ಅಲ್ಲದೇ, ಈಶ್ವರನ ದೇವಾಲಯದ ಒಳಕ್ಕೆ ಕಾಲಿಟ್ಟಿರುವುದರಿಂದ ಬಿಜೆಪಿಯನ್ನು ಆ ಶಿವ ಈ ಚುನಾವಣೆಯಲ್ಲಿ ಧೂಳೀಪಟ ಮಾಡಲಿದ್ದಾನೆ ಎಂದು ಗುಡುಗಿದ್ದಾರೆ.
ಕುಣಿಗಲ್​ನಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಪುಟ್ಟರಾಜು‌ ಮನೆ ಮೇಲೆ 10 ದಿನದಲ್ಲಿ 2 ಬಾರಿ ಐಟಿ ದಾಳಿ ಮಾಡಿದ್ದಾರೆ. ಅರಗನಹಳ್ಳಿಯ ಶಿವನ ಅರ್ಚಕರ ಮನೆಗೂ ದಾಳಿ ಮಾಡಿದ್ದಾರೆ. ದೇವಾಲಯದ ಗರ್ಭಗುಡಿಗೂ ಹೋಗಿ ಐಟಿಯವರು ಪರಿಶೀಲಿಸಿದ್ದಾರೆ. ದೇವೇಗೌಡರ ಕುಟುಂಬದ ದುಡ್ಡಿದೆ ಎಂದು ದಾಳಿ ಮಾಡಿದ್ದಾರೆ. ಆದರೆ ಅವರಿಗೆ ಏನು ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
30-50 ಕೋಟಿ ರೂ ಹಣದ ಆಮಿಷ ಒಡ್ಡಿ ಸರ್ಕಾರ ಅಭದ್ರತೆ ಮಾಡಲು ಬಿಜೆಪಿಯವರು ಮುಂದಾಗಿದ್ದರು. ಆದರೆ, ಇದನ್ನೆಲ್ಲಾ ಮೆಟ್ಟಿನಿಂತು ನಾವು ಹೊರಟಿದ್ದೇವೆ. ಈಗ ಐಟಿ ಅಸ್ತ್ರವನ್ನು ನಮ್ಮ ಮೇಲೆ ಬಳಸಲು ಮುಂದಾಗಿದ್ದಾರೆ. ಆದರೆ ಆ  ಶಿವ ಇವರನ್ನು ಸುಮ್ಮನೆ ಬಿಡುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ