ಪ್ರಧಾನಿ ಮೋದಿ 
ಕರ್ನಾಟಕ

ಊಟಕ್ಕೆ ಗತಿ ಇಲ್ಲದವರು ಸೇನೆ ಸೇರ್ತಾರೆ: ಸೈನಿಕರಿಗೆ ಕುಮಾರಸ್ವಾಮಿ ಅಪಮಾನ- ಪ್ರಧಾನಿ ಮೋದಿ

ಎರಡು ಹೊತ್ತಿಗೆ ಊಟಕ್ಕೆ ಗತಿ ಇಲ್ಲದವರು ಸೇನೆ ಸೇರುತ್ತಾರೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ , ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಂಗಾವತಿ: ಎರಡು ಹೊತ್ತಿಗೆ ಊಟಕ್ಕೆ ಗತಿ ಇಲ್ಲದವರು ಸೇನೆ ಸೇರುತ್ತಾರೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ , ಬೆಲೆ ತೆರಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಕುಮಾರಸ್ವಾಮಿ ಹೃದಯದಲ್ಲಿರುವುದನ್ನೇ ಹೇಳಿದ್ದಾರೆ. ಈ ಮೂಲಕ ಭಾರತೀಯ ಸೇನೆಗೆ ಅಪಮಾನ ಮಾಡಿದ್ದಾರೆ ಎಂದು ಮೋದಿ ಟೀಕಿಸಿದ್ದಾರೆ.

ದೇಶ ಸೇವೆಗೆ , ರಕ್ಷಣೆಗೆ ಎಲ್ಲಾ ತ್ಯಾಗಕ್ಕೂ ಸಿದ್ಧ ವಿರುವ ಸೈನಿಕರು ಕನಿಷ್ಠ ತಾಪಮಾನದಲ್ಲೂ ಸೇವೆ ಸಲ್ಲಿಸುತ್ತಾರೆ. ತಿಂಗಳಾನುಗುಟ್ಟಲೇ  ಊಟ ಇಲ್ಲದಿದ್ದರೂ  ದೇಶ ಕಾಯುತ್ತಾರೆ. ಅಂತಹ ವೀರ ಸೈನಿಕರ ತಪಸ್ಸನ್ನೂ ನೀವೆಂದೂ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ. ಮಾತು ತಪ್ಪಾಗಿ ಅರ್ಥೈಸಲಾಗಿದೆ ಎಂದು ಈಗ ಹೇಳಿ ತಪ್ಪಿಸಿಕೊಳ್ಳಲಾಗುವುದಿಲ್ಲ ಎಂದರು.

ಇದೆಂತಹ ಯೋಚನೆ? ಕುಮಾರಸ್ವಾಮಿ ಅವರ ಮನಸ್ಸಿನಲ್ಲಿರುವುದೇ  ಮಾತಿನ ಮೂಲಕ ಹೊರಗೆ ಬಂದಿದೆ. ಈ ಮಾತು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ , ನಿಮ್ಮ ಮಾತು ವೀರಯೋಧರಿಗೆ ಮಾಡಿದ ಅವಮಾನವಾಗಿದೆ. ಗಡಿಯಲ್ಲಿ ಹೋರಾಡವವರ ಬಗ್ಗೆ ನೀವಾಡಿರುವ ಮಾತಿಗೆ  ಬೆಲೆ ತೆರಬೇಕಾಗುತ್ತದೆ ಎಂದು ಮೋದಿ ಹೇಳಿದರು.

ವೀರ ಯೋಧರ ಬಗ್ಗೆ ಈ ರೀತಿ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ. ಯಾವ ಮುಖ ಇಟ್ಟುಕೊಂಡು ವೋಟ್ ಕೇಳಲು ಜನರ ಬಳಿಗೆ ಹೋಗ್ತಿರಿ ನೀವು ಕೂಡಾ ಸಂಪೂರ್ಣ ಮುಳುಗಿ ಹೋಗ್ತಿರಾ ಎಂದು  ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಈ ಹಿಂದೆ 10 ಪರ್ಸೆಂಟ್ ಕಾಂಗ್ರೆಸ್ ಸರ್ಕಾರ ಇತ್ತು. ಈಗ ಜೆಡಿಎಸ್ ಜೊತೆ ಸೇರಿ 20 ಪರ್ಸೆಂಟ್ ಸರ್ಕಾರ ಆಗಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಮೋದಿ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್