ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 
ಕರ್ನಾಟಕ

ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಅಫಿಡೆವಿಟ್ ಸಂಕಷ್ಟ

ಹಾಸನದ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪ್ರಮಾಣಪತ್ರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್​ ನೀಡಿದ್ದು

ನವದೆಹಲಿ: ಹಾಸನದ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ  ಪ್ರಮಾಣಪತ್ರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್,   ಜಿಲ್ಲಾ ಚುನಾವಣಾಧಿಕಾರಿಗೆ ನೋಟಿಸ್​ ನೀಡಿದ್ದು, ನಾಮಪತ್ರ ಸಲ್ಲಿಸುವ ವೇಳೆ ಆಸ್ತಿ ವಿವರವನ್ನು ಮರೆಮಾಚಿ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದರೆಂಬ ಆರೋಪಕ್ಕೆ ಗುರಿಯಾಗಿದ್ದರು. 
ಅಭ್ಯರ್ಥಿ ಪ್ರಜ್ವಲ್​  ರೇವಣ್ಣ ಹಾಗೂ ಭವಾನಿ ರೇವಣ್ಣ ಪ್ರತ್ಯೇಕವಾಗಿ ಡ್ರೋಣ್ ವರ್ಕ್ ಫೋರ್ಸ್ ಲಿಮಿಟೆಡ್ ಮತ್ತು  ಅಧಿಕಾರ್ ವೆಂಚರ್ಸ್ ಕಂಪನಿಗೆ  ಹಣ ಹೂಡಿಕೆ ಮಾಡಿದ್ದಾರೆ. ಈ ಮಾಹಿತಿಯನ್ನು  ಅವರು ತಮ್ಮ ಆಸ್ತಿ ವಿವರದಲ್ಲಿ ದಾಖಲಿಸಿಲ್ಲ.ಅಲ್ಲದೆ ವಿವಿಧ ಕಂಪನಿಗಳಿಗೆ ಪ್ರಜ್ವಲ್​ ರೇವಣ್ಣ ಪಾಲುದಾರರಾಗಿದ್ದರೂ ಅದರ ಮಾಹಿತಿಯನ್ನು  ನಾಮಪತ್ರ ಸಲ್ಲಿಕೆ ವೇಳೆ ದಾಖಲಿಸಿಲ್ಲ ಎಂದು ಆರೋಪಿಸಿ ಆರ್​ಟಿಐ  ಕಾರ್ಯಕರ್ತ ಟಿ.ಜೆ ಅಬ್ರಾಹಂ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ್ದರು. 
ಈ ದೂರಿನ ಅನ್ವಯ ಕ್ರಮಕ್ಕೆ  ಮುಂದಾಗಿರುವ ಚುನಾವಣಾ ಆಯೋಗ ಈ ಕುರಿತು ವಿಚಾರಣೆ ನಡೆಸುವಂತೆ ನೋಟಿಸ್ ಜಾರಿ  ಮಾಡಿದೆ. ಈ ಹಿಂದೆ ಕೂಡ ಬಿಜೆಪಿ ಅಭ್ಯರ್ಥಿ ಎ. ಮಂಜು ಪ್ರಜ್ವಲ್​ ರೇವಣ್ಣ ಸುಳ್ಳು ಆಸ್ತಿ ವಿವರ  ನೀಡಿದ್ದಾರೆ ಎಂದು ಆರೋಪ ಮಾಡಿ ಚುನಾವಣಾಧಿಕಾರಿಗೆ ದೂರು ನೀಡಿದ್ದರು.
ಮತದಾನಕ್ಕೆ 5 ದಿನಗಳು ಬಾಕಿ ಇರುವಾಗಲೇ ಚುನಾವಣಾ ಆಯೋಗ ಜಾರಿ ಮಾಡಿರುವ ನೋಟಿಸ್​ ಪ್ರಜ್ವಲ್​ ರೇವಣ್ಣಗೆ ಆತಂಕ ತಂದೊಡ್ಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT