ಸುಮಲತಾ ಅಂಬರೀಷ್ ಪ್ರಚಾರ 
ಕರ್ನಾಟಕ

ಮಂಡ್ಯ: ಸುಮಲತಾ ಅಂಬರೀಷ್ ಪ್ರಚಾರದ ವೇಳೆ ಜೆಡಿಎಸ್ ಬಾವುಟ ಹಾರಿಸಿ ಬೆಂಬಲ!

ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮಳವಳ್ಳಿ ತಾಲೂಕು ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಷ್ ಇಂದು ಪ್ರಚಾರ ನಡೆಸಿದರು

ಮಂಡ್ಯ: ಲೋಕಸಭೆ ಚುನಾವಣೆಗೆ ಕೇವಲ ಐದು ದಿನಗಳು ಬಾಕಿ ಇರುವಂತೆಯೇ  ಪ್ರಚಾರದ ಅಖಾಡ ತೀವ್ರಗೊಂಡಿದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು,  ಮಳವಳ್ಳಿ ತಾಲೂಕು ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಷ್ ಇಂದು ಪ್ರಚಾರ ನಡೆಸಿದರು

ಕೊನ್ನಾಪುರ ಗ್ರಾಮದಲ್ಲಿ ಸುಮಲತಾ ಅವರು ಪ್ರಚಾರಕ್ಕೆ ಬಂದಾಗ ಜೆಡಿಎಸ್ ಬಾವುಟವನ್ನು ಹಿಡಿದ ಕಾರ್ಯಕರ್ತರು  ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ  ಬೆಂಬಲ ಸೂಚಿಸಿದರು. ಎರಡೂ ರಾಷ್ಟ್ರೀಯ ಪಕ್ಷಗಳ ಬಾವುಟಗಳ ಜೊತೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷದ ಬಾವುಟ ಕೂಡಾ ಹಾರಾಡುವ ಮೂಲಕ  ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ವ್ಯಕ್ತಪಡಿಸಲಾಯಿತು.

ಸುಮಲತಾ ಅವರು ಸುಮಾರು 30 ಹಳ್ಳಿಗಳಲ್ಲಿ ಪ್ರಚಾರ ನಡೆಸಿದರು.ಹಲವು ಗ್ರಾಮಗಳಲ್ಲಿ ಸುಮಲತಾಗೆ ಅಭಿಮಾನಿಗಳು ಹಾಗೂ ಮತದಾರರು ಅದ್ಧೂರಿ ಸ್ವಾಗತ ಕೋರಿ, ಮತ ಹಾಕುವ ಭರವಸೆ ನೀಡಿದ್ದಾರೆ.
ಈ ಮಧ್ಯೆ ಬೆಳಗಾವಿ ಮತ್ತು ಧಾರವಾಡದಿಂದ ಮಂಡ್ಯಕ್ಕೆ ಆಗಮಿಸಿದ ಮಹಿಳೆಯರ ತಂಡವೊಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ಸದ್ದಿಲ್ಲದೆ ಪ್ರಚಾರ ನಡೆಸುತ್ತಿದೆ.ಮಂಡ್ಯದ ಗ್ರಾಮಾಂತರ ಪ್ರದೇಶದಲ್ಲಿ ಬೆಳಗಾವಿ, ಧಾರವಾಡದ ಮಹಿಳೆಯರ ತಂಡ ಪ್ರಚಾರ ಕೈಗೊಂಡು, ಸ್ಥಳೀಯ ಮಹಿಳೆಯರ ಮತ ಸೆಳೆಯುವ ಪ್ರಯತ್ನ ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT