ಸುಮಲತಾ ಅಂಬರೀಷ್ ಪ್ರಚಾರ 
ಕರ್ನಾಟಕ

ಮಂಡ್ಯ: ಸುಮಲತಾ ಅಂಬರೀಷ್ ಪ್ರಚಾರದ ವೇಳೆ ಜೆಡಿಎಸ್ ಬಾವುಟ ಹಾರಿಸಿ ಬೆಂಬಲ!

ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮಳವಳ್ಳಿ ತಾಲೂಕು ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಷ್ ಇಂದು ಪ್ರಚಾರ ನಡೆಸಿದರು

ಮಂಡ್ಯ: ಲೋಕಸಭೆ ಚುನಾವಣೆಗೆ ಕೇವಲ ಐದು ದಿನಗಳು ಬಾಕಿ ಇರುವಂತೆಯೇ  ಪ್ರಚಾರದ ಅಖಾಡ ತೀವ್ರಗೊಂಡಿದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು,  ಮಳವಳ್ಳಿ ತಾಲೂಕು ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಷ್ ಇಂದು ಪ್ರಚಾರ ನಡೆಸಿದರು

ಕೊನ್ನಾಪುರ ಗ್ರಾಮದಲ್ಲಿ ಸುಮಲತಾ ಅವರು ಪ್ರಚಾರಕ್ಕೆ ಬಂದಾಗ ಜೆಡಿಎಸ್ ಬಾವುಟವನ್ನು ಹಿಡಿದ ಕಾರ್ಯಕರ್ತರು  ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ  ಬೆಂಬಲ ಸೂಚಿಸಿದರು. ಎರಡೂ ರಾಷ್ಟ್ರೀಯ ಪಕ್ಷಗಳ ಬಾವುಟಗಳ ಜೊತೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷದ ಬಾವುಟ ಕೂಡಾ ಹಾರಾಡುವ ಮೂಲಕ  ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ವ್ಯಕ್ತಪಡಿಸಲಾಯಿತು.

ಸುಮಲತಾ ಅವರು ಸುಮಾರು 30 ಹಳ್ಳಿಗಳಲ್ಲಿ ಪ್ರಚಾರ ನಡೆಸಿದರು.ಹಲವು ಗ್ರಾಮಗಳಲ್ಲಿ ಸುಮಲತಾಗೆ ಅಭಿಮಾನಿಗಳು ಹಾಗೂ ಮತದಾರರು ಅದ್ಧೂರಿ ಸ್ವಾಗತ ಕೋರಿ, ಮತ ಹಾಕುವ ಭರವಸೆ ನೀಡಿದ್ದಾರೆ.
ಈ ಮಧ್ಯೆ ಬೆಳಗಾವಿ ಮತ್ತು ಧಾರವಾಡದಿಂದ ಮಂಡ್ಯಕ್ಕೆ ಆಗಮಿಸಿದ ಮಹಿಳೆಯರ ತಂಡವೊಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ಸದ್ದಿಲ್ಲದೆ ಪ್ರಚಾರ ನಡೆಸುತ್ತಿದೆ.ಮಂಡ್ಯದ ಗ್ರಾಮಾಂತರ ಪ್ರದೇಶದಲ್ಲಿ ಬೆಳಗಾವಿ, ಧಾರವಾಡದ ಮಹಿಳೆಯರ ತಂಡ ಪ್ರಚಾರ ಕೈಗೊಂಡು, ಸ್ಥಳೀಯ ಮಹಿಳೆಯರ ಮತ ಸೆಳೆಯುವ ಪ್ರಯತ್ನ ಮಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT