ಮಂಡ್ಯ: ಲೋಕಸಭೆ ಚುನಾವಣೆಗೆ ಕೇವಲ ಐದು ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಖಾಡ ತೀವ್ರಗೊಂಡಿದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮಳವಳ್ಳಿ ತಾಲೂಕು ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಷ್ ಇಂದು ಪ್ರಚಾರ ನಡೆಸಿದರು
ಕೊನ್ನಾಪುರ ಗ್ರಾಮದಲ್ಲಿ ಸುಮಲತಾ ಅವರು ಪ್ರಚಾರಕ್ಕೆ ಬಂದಾಗ ಜೆಡಿಎಸ್ ಬಾವುಟವನ್ನು ಹಿಡಿದ ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಳ್ಳುವ ಮೂಲಕ ಬೆಂಬಲ ಸೂಚಿಸಿದರು. ಎರಡೂ ರಾಷ್ಟ್ರೀಯ ಪಕ್ಷಗಳ ಬಾವುಟಗಳ ಜೊತೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷದ ಬಾವುಟ ಕೂಡಾ ಹಾರಾಡುವ ಮೂಲಕ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ವ್ಯಕ್ತಪಡಿಸಲಾಯಿತು.
ಸುಮಲತಾ ಅವರು ಸುಮಾರು 30 ಹಳ್ಳಿಗಳಲ್ಲಿ ಪ್ರಚಾರ ನಡೆಸಿದರು.ಹಲವು ಗ್ರಾಮಗಳಲ್ಲಿ ಸುಮಲತಾಗೆ ಅಭಿಮಾನಿಗಳು ಹಾಗೂ ಮತದಾರರು ಅದ್ಧೂರಿ ಸ್ವಾಗತ ಕೋರಿ, ಮತ ಹಾಕುವ ಭರವಸೆ ನೀಡಿದ್ದಾರೆ.
ಈ ಮಧ್ಯೆ ಬೆಳಗಾವಿ ಮತ್ತು ಧಾರವಾಡದಿಂದ ಮಂಡ್ಯಕ್ಕೆ ಆಗಮಿಸಿದ ಮಹಿಳೆಯರ ತಂಡವೊಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರವಾಗಿ ಸದ್ದಿಲ್ಲದೆ ಪ್ರಚಾರ ನಡೆಸುತ್ತಿದೆ.ಮಂಡ್ಯದ ಗ್ರಾಮಾಂತರ ಪ್ರದೇಶದಲ್ಲಿ ಬೆಳಗಾವಿ, ಧಾರವಾಡದ ಮಹಿಳೆಯರ ತಂಡ ಪ್ರಚಾರ ಕೈಗೊಂಡು, ಸ್ಥಳೀಯ ಮಹಿಳೆಯರ ಮತ ಸೆಳೆಯುವ ಪ್ರಯತ್ನ ಮಾಡುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos