ಸಂಗ್ರಹ ಚಿತ್ರ 
ಕರ್ನಾಟಕ

ಮಂಡ್ಯ: ಸುಮಲತಾ ಅಂಬರೀಷ್ ಗೆ ತಿಥಿ' ಸಿನಿಮಾ ಖ್ಯಾತಿಯ ಗಡ್ಡಪ್ಪ ಬೆಂಬಲ

ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಬೆಂಬಲ ನೀಡಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿನ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿ, ಗಡ್ಡಪ್ಪ ಅವರನ್ನು ಸನ್ಮಾನಿಸುವ ಮೂಲಕ ಸುಮಲತಾಗೆ ವೋಟು ಹಾಕುವಂತೆ ಮನವಿ ಮಾಡಿದರು.

ಮಂಡ್ಯ: ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ   ಪಕ್ಷೇತರ  ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಬೆಂಬಲ ನೀಡಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿನ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್  ಭೇಟಿ ಮಾಡಿ, ಗಡ್ಡಪ್ಪ ಅವರನ್ನು ಸನ್ಮಾನಿಸುವ ಮೂಲಕ ಸುಮಲತಾಗೆ ವೋಟು ಹಾಕುವಂತೆ ಮನವಿ ಮಾಡಿದರು.

ದರ್ಶನ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಡ್ಡಪ್ಪ,  ದರ್ಶನ್ ಭೇಟಿ ಮಾಡಿದ್ದು ಬಹಳ ಸಂತೋಷ ಆಗಿದೆ. ಸುಮಲತಾ ಪರ ಮತ ಹಾಕಲು ಹೇಳಿದ್ರು, ನಾನು ಸುಮಲತಾ ಅವರಿಗೆ ಮತ ಹಾಕೋದು ಎಂದು ಸ್ಪಷ್ಪಪಡಿಸಿದರು.

ನಟ ಅಂಬರೀಷ್ ತಾವು ಬದುಕಿದ್ದಾಗ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಪತ್ನಿ ಸುಮಲತಾ ಸಹ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ'' ಎಂದು  ಸುಮಲತಾ ಅಂಬರೀಷ್ ಪರವಾಗಿ ಮಾತನಾಡಿದರು.
ನಮ್ಮೂರಲ್ಲಿ ಮುಕ್ಕಾಲು ಭಾಗ ಸುಮಲತಾರಿಗೆ ಮತ ಹಾಕುತ್ತಾರೆ. ಉಪೇಂದ್ರ ಕೂಡಾ ನಮ್ಮೂರಿಗೆ ಬಂದಿದ್ದರು. ಆಗ ಅವರು ಕೂಡಾ ಮತ ಹಾಕುವಂತೆ ಕೇಳಿಕೊಂಡಿದ್ದರು. ಆದರೆ, ನಾವೆಲ್ಲ ಸುಮಲತಾರಿಗೆ ವೋಟು ಹಾಕೋದು ಎಂದು ಗಡ್ಡಪ್ಪ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT