ಮಾಜಿ ಪ್ರಧಾನಿ ದೇವೇಗೌಡರು ತುಮಕೂರಿನಲ್ಲಿ ಭಾಗವಹಿಸಿದ್ದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಕಂಡುಬಂದ ಖಾಲಿ ಕುರ್ಚಿಗಳು 
ಕರ್ನಾಟಕ

ತುಮಕೂರಿನ ಕುರುಬ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಖಾಲಿ ಕುರ್ಚಿಗಳ ಸ್ವಾಗತ!

ಇಲ್ಲಿ ನಡೆದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ತೀವ್ರ...

ತುಮಕೂರು: ಇಲ್ಲಿ ನಡೆದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ತೀವ್ರ ಮುಜುಗರವಾಗುವ ಸನ್ನಿವೇಶ ನಿನ್ನೆ ಎದುರಾಯಿತು. ಸಮ್ಮೇಳನ ನಡೆದ ಸ್ಥಳದಲ್ಲಿ ಸುಮಾರು 5 ಸಾವಿರ ಜನರು ಸೇರುವ ನಿರೀಕ್ಷೆಯಿದ್ದಿತು.
ಆದರೆ ಅಲ್ಲಿ ಸೇರಿದ್ದು ಕೇವಲ ಸುಮಾರು ಸಾವಿರ ಮಂದಿ ಮಾತ್ರ, ಕಾರ್ಯಕರ್ತರು ಹಾಕಿದ್ದ ಕುರ್ಚಿಗಳೆಲ್ಲವೂ ಖಾಲಿ ಖಾಲಿಯಾಗಿದ್ದವು. ಮಾಜಿ ಸಿಎಂ ಸಿದ್ದರಾಮಯ್ಯನವರಿಂದಾಗಿ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕುರುಬ ಸಮುದಾಯದವರು ಸೇರಲಿಲ್ಲ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಮುಖಂಡ ಕೆಎನ್ ರಾಜಣ್ಣ, ಮಾಜಿ ಪ್ರಧಾನಿ ದೇವೇಗೌಡರು ರಾಜಕೀಯವಾಗಿ ಸಿದ್ದರಾಮಯ್ಯನವರನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ್ದು ಸೇರಿದಂತೆ ಹಲವು ಬಾರಿ ತುಳಿದಿದ್ದರಿಂದ ನಾವು ಈ ಬಾರಿ ದೇವೇಗೌಡರನ್ನು ತುಮಕೂರಿನಲ್ಲಿ ಸೋಲಿಸಬೇಕೆಂದು ನಿರ್ಣಯ ಕೈಗೊಂಡಿದ್ದೇವೆ. ನಮ್ಮ ಸಮುದಾಯದವರನ್ನು ಓಲೈಸುವ ಸಲುವಾಗಿ ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಜಯ ಶಂಕರ್ ಅವರನ್ನು ಗೆಲ್ಲಿಸಬೇಕೆಂದು ಬೆಂಬಲ ಸೂಚಿಸಿದ್ದಾರೆ. ವಿಜಯ್ ಶಂಕರ್ ಅವರು ಕುರುಬ ನಾಯಕರಾಗಿದ್ದು ಸಿದ್ದರಾಮಯ್ಯನವರ ಬೆಂಬಲಿತ ಅಭ್ಯರ್ಥಿ. ಆದರೆ ವಾಸ್ತವವಾಗಿ ದೇವೇಗೌಡರಿಗೆ ಕುರುಬ ಜನಾಂಗದ ಮೇಲೆ ಪ್ರೀತಿ, ಅಭಿಮಾನ ಇಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT