ಮಾಜಿ ಪ್ರಧಾನಿ ದೇವೇಗೌಡರು ತುಮಕೂರಿನಲ್ಲಿ ಭಾಗವಹಿಸಿದ್ದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಕಂಡುಬಂದ ಖಾಲಿ ಕುರ್ಚಿಗಳು 
ಕರ್ನಾಟಕ

ತುಮಕೂರಿನ ಕುರುಬ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಖಾಲಿ ಕುರ್ಚಿಗಳ ಸ್ವಾಗತ!

ಇಲ್ಲಿ ನಡೆದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ತೀವ್ರ...

ತುಮಕೂರು: ಇಲ್ಲಿ ನಡೆದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ತೀವ್ರ ಮುಜುಗರವಾಗುವ ಸನ್ನಿವೇಶ ನಿನ್ನೆ ಎದುರಾಯಿತು. ಸಮ್ಮೇಳನ ನಡೆದ ಸ್ಥಳದಲ್ಲಿ ಸುಮಾರು 5 ಸಾವಿರ ಜನರು ಸೇರುವ ನಿರೀಕ್ಷೆಯಿದ್ದಿತು.
ಆದರೆ ಅಲ್ಲಿ ಸೇರಿದ್ದು ಕೇವಲ ಸುಮಾರು ಸಾವಿರ ಮಂದಿ ಮಾತ್ರ, ಕಾರ್ಯಕರ್ತರು ಹಾಕಿದ್ದ ಕುರ್ಚಿಗಳೆಲ್ಲವೂ ಖಾಲಿ ಖಾಲಿಯಾಗಿದ್ದವು. ಮಾಜಿ ಸಿಎಂ ಸಿದ್ದರಾಮಯ್ಯನವರಿಂದಾಗಿ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕುರುಬ ಸಮುದಾಯದವರು ಸೇರಲಿಲ್ಲ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಮುಖಂಡ ಕೆಎನ್ ರಾಜಣ್ಣ, ಮಾಜಿ ಪ್ರಧಾನಿ ದೇವೇಗೌಡರು ರಾಜಕೀಯವಾಗಿ ಸಿದ್ದರಾಮಯ್ಯನವರನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ್ದು ಸೇರಿದಂತೆ ಹಲವು ಬಾರಿ ತುಳಿದಿದ್ದರಿಂದ ನಾವು ಈ ಬಾರಿ ದೇವೇಗೌಡರನ್ನು ತುಮಕೂರಿನಲ್ಲಿ ಸೋಲಿಸಬೇಕೆಂದು ನಿರ್ಣಯ ಕೈಗೊಂಡಿದ್ದೇವೆ. ನಮ್ಮ ಸಮುದಾಯದವರನ್ನು ಓಲೈಸುವ ಸಲುವಾಗಿ ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಜಯ ಶಂಕರ್ ಅವರನ್ನು ಗೆಲ್ಲಿಸಬೇಕೆಂದು ಬೆಂಬಲ ಸೂಚಿಸಿದ್ದಾರೆ. ವಿಜಯ್ ಶಂಕರ್ ಅವರು ಕುರುಬ ನಾಯಕರಾಗಿದ್ದು ಸಿದ್ದರಾಮಯ್ಯನವರ ಬೆಂಬಲಿತ ಅಭ್ಯರ್ಥಿ. ಆದರೆ ವಾಸ್ತವವಾಗಿ ದೇವೇಗೌಡರಿಗೆ ಕುರುಬ ಜನಾಂಗದ ಮೇಲೆ ಪ್ರೀತಿ, ಅಭಿಮಾನ ಇಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT