ಸುಮಲತಾ ಅಂಬರೀಷ್ 
ಕರ್ನಾಟಕ

ಸುಮಲತಾ ಅಂಬರೀಷ್ ಗೆ ಹೆಚ್ಚಿನ ಭದ್ರತೆ ನೀಡುವಂತೆ ಡಿಜಿ, ಐಜಿಪಿಗೆ ಚುನಾವಣಾ ಆಯೋಗ ಸೂಚನೆ

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ  ಹೆಚ್ಚಿನ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ.

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎದುರಾಳಿ ಸುಮಲತಾ ಅಂಬರೀಷ್ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಯಾದರೆ ನಾವು ಜವಾಬ್ದಾರಲ್ಲ ಎಂಬರ್ಥದಲ್ಲಿ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯಿಂದ ಆತಂಕಗೊಂಡಿದ್ದ ಸುಮಲತಾ ಅಂಬರೀಷ್  ಪರ ಚುನಾವಣಾ ಏಜೆಂಟ್ ಮದನ್ ಕುಮಾರ್ , ಸುಮಲತಾ ಅಂಬರೀಷ್ ಅವರಿಗೆ  ಭದ್ರತೆ ಹೆಚ್ಚಿಸುವಂತೆ ಚುನಾವಣಾ ಆಯೋಗಕ್ಕೆ ಇ- ಮೇಲ್  ಮೂಲಕ ದೂರು ಸಲ್ಲಿಸಿದ್ದರು.

ಈ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯ ಚುನಾವಣಾ ಆಯೋಗ, ಸುಮಲತಾ ಅಂಬರೀಷ್ ಅವರಿಗೆ ಭದ್ರತೆ ವಿಚಾರದಲ್ಲಿ ಪರಿಶೀಲಿಸುವಂತೆ  ಹಾಗೂ 24 ಗಂಟೆಯೊಳಗೆ ಈ ಸಂಬಂಧ ವರದಿ ಸಲ್ಲಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT