ನಟ ದರ್ಶನ್ 
ಕರ್ನಾಟಕ

ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ,ಒಂದು ಲೋಟ ಹಾಲು ಕರೆದು ತೋರಿಸಲಿ- ಸಿಎಂ,ನಿಖಿಲ್ ಗೆ ದರ್ಶನ್ ಸವಾಲು

ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್‌  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.
ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು  ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ, ಒಂದು ಲೋಟ ಹಾಲು ಕರೆದು ತೋರಿಸಲಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್  ಸವಾಲು ಹಾಕಿದರು
ಸಿನಿಮಾದವರು ಸಿನಿಮಾದವರು ಎನ್ನುತ್ತಾರಲ್ಲ, ಅವರು ನಿರ್ಮಾಪಕರಲ್ವಾ. ಅವರ ಮಗನಿಗಾಗಿ 60 ಕೋಟಿ ರೂ. ಹಾಕಿ ಸಿನಿಮಾ ಮಾಡಿದ್ದು ಸುಳ್ಳಾ. ಅದೇ ದುಡ್ಡನ್ನು ಮಂಡ್ಯದಲ್ಲಿ ವೃದ್ದಾಶ್ರಮ, ಅನಾಥಶ್ರಮ ಮಾಡಿದ್ದರೆ ಪ್ರಚಾರಕ್ಕೆ ಬರುವ ಆಗಿರಲಿಲ್ಲ.  ಆಗ ಬಂದು ಅವರು ವೋಟು ಕೇಳಿದ್ದರೆ ನ್ಯಾಯ ಇರುತ್ತಿತ್ತು ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ಕೆಲವೇ ಮಂದಿ  ಡಿ ಬಾಸ್ ಅಂತಾ ಕರೆಯುತ್ತಿದ್ದರು. ಈಗ ಮುಖ್ಯಮಂತ್ರಿಯಿಂದಾಗಿ ಆ ಹೆಸರು ಕರ್ನಾಟಕದ ಉದ್ದಕ್ಕೂ ಖ್ಯಾತಿಯಾಗಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತುಂಬಾ ಥ್ಯಾಂಕ್ಸ್ ಹೇಳುವುದಾಗಿ ದರ್ಶನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT