ಸಂಗ್ರಹ ಚಿತ್ರ 
ಕರ್ನಾಟಕ

ಮಂಡ್ಯ: ದಿಗ್ಗಜರ ಭಾಷಣದ ಸಾರಾಂಶ ಗ್ರಹಿಸಿದ್ದೇನೆ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸ್ವಾಭಿಮಾನಿ ಸಮ್ಮಿಲನ ಹೆಸರಿನಲ್ಲಿ ಹೆಸರಿನಲ್ಲಿ ನಡೆಸಿದ ಸಮಾವೇಶದ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.

ಮಂಡ್ಯ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸ್ವಾಭಿಮಾನಿ ಸಮ್ಮಿಲನ ಹೆಸರಿನಲ್ಲಿ  ಹೆಸರಿನಲ್ಲಿ ನಡೆಸಿದ ಸಮಾವೇಶದ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.

ಮಂಡ್ಯದಲ್ಲಿ  ಪಕ್ಷೇತರ ಅಭ್ಯರ್ಥಿ ಪರವಾಗಿ ನಡೆದ ಸಮಾವೇಶದ ದಿಗ್ಗಜರ ಭಾಷಣದ ಸಾರಾಂಶವನ್ನು ಗ್ರಹಿಸಿದ್ದೇನೆ. ನನ್ನ ಬಗ್ಗೆ ಮಾಡಿರುವ ವೈಯಕ್ತಿಕ ಆಪಾದನೆಗಳಿಗೆ ಉತ್ತರ ನೀಡುವ ಶಕ್ತಿ ಮಂಡ್ಯ ಜಿಲ್ಲೆಯ ನನ್ನ ಬಾಂಧವರಿಗಿದೆ. ಉತ್ತರ ಕೊಡುವ ರೀತಿಯೂ ಅವರಿಗೆ ಗೊತ್ತಿದೆ ಎಂದಿದ್ದಾರೆ.

ಅಂಬರೀಷ್ ಹಾಗೂ ನನ್ನ ನಡುವಿನ ಸ್ನೇಹ ಮೂರು ದಶಕಗಳದ್ದು. ಅದು ರಾಜಕಾರಣದ ವ್ಯಾಪ್ತಿಯನ್ನೂ ಮೀರಿದ ಅಪ್ಪಟ ಗೆಳೆತನ. ಈ ಸ್ನೇಹಕ್ಕೆ ಅವರ ಕುಟುಂಬ ಸೂಕ್ತ ಕಾಣಿಕೆ ನೀಡಿದೆ' ಎಂದು ಬೇಸರವೂ ವ್ಯಕ್ತಪಡಿಸಿದ್ದಾರೆ.

ಅಂಬರೀಷ್ ಜೊತೆಗಿನ ಸ್ನೇಹ  ರಾಜಕಾರಣದ ವ್ಯಾಪ್ತಿಯನ್ನೂ ಮೀರಿದ ಅಪ್ಪಟ ಗೆಳೆತನ.ಈಸ್ನೇಹಕ್ಕೆ ಅವರ ಕುಟುಂಬ ಸೂಕ್ತಕಾಣಿಕೆ ನೀಡಿದೆ.ಮಂಡ್ಯದ ಮಣ್ಣಿನಮೇಲೆ ನಿಂತು ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಪಕ್ಷೇತರ ಅಭ್ಯರ್ಥಿಯ ಪ್ರತಿಯೊಂದು ಮಾತುಕೂಡ ಮಂಡ್ಯದ ಮತದಾರರನ್ನು ಮೋಡಿಮಾಡುವ ತಂತ್ರ ಎಂಬುದರ ನಿಚ್ಚಳ ಅರಿವು ಮಂಡ್ಯದ ಜನರಿಗಿದೆ.ಇದಕ್ಕಿಂತ ಹೆಚ್ಚುಹೇಳಲು ನಾನು ಇಚ್ಛಿಸುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT