ಸಿದ್ದರಾಮಯ್ಯ 
ಕರ್ನಾಟಕ

ಖರ್ಗೆ ಗೆಲ್ಲಿಸಿ ಕಲಬುರಗಿ ಘನತೆ ಎತ್ತಿಹಿಡಿಯಲು ಸಿದ್ದರಾಮಯ್ಯ ಕರೆ

ಖರ್ಗೆಯನ್ನು ಗೆಲ್ಲಿಸುವ ಮೂಲಕ ಉತ್ತರ ಕರ್ನಾಟಕ ಭಾಗದ ಗೌರವ ಎತ್ತಿಹಿಡಿಯಬೇಕು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಅಫಜಲಪುರ:  ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೆದರಿಕೆಯಿಂದ ಅವರನ್ನು ಸೋಲಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಣತೊಟ್ಟಿದ್ದಾರೆ .ಆದ್ದರಿಂದ ಖರ್ಗೆಯನ್ನು  ಗೆಲ್ಲಿಸುವ ಮೂಲಕ  ಉತ್ತರ ಕರ್ನಾಟಕ ಭಾಗದ ಗೌರವ ಎತ್ತಿಹಿಡಿಯಬೇಕು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಅಫಜಲಪುರ ಪಟ್ಟಣದಲ್ಲಿ ಇಂದು ಏರ್ಪಡಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಮೇಶ್ ಜಾಧವ್ ಒಳ್ಳೆಯನಿರಬಹುದು ಎಂದು ಸಂಸದೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದೆ. ಆಗಾಗ ನನ್ನ ಭೇಟಿ ಮಾಡುತ್ತಿದ್ದ  ಜಾಧವ್, ಖರ್ಗೆ ಹಾಗೂ ಅವರ ಮಗನನ್ನು ಬೈಯುತ್ತಿದ್ದ. ನೀನ್ಯಾಕೆ ಅವರನ್ನ ಬೈತಿಯಾ ಹೋಗಯ್ಯಾ. ಮುಂದಿನ ಸಲ ಕ್ಯಾಬಿನೆಟ್ ವಿಸ್ತರಣೆ ಮಾಡುವಾಗ ನಿನಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿ ಕಳಿಸಿದ್ದೆ. ಆದರೆ, ಗೋಮುಖ ವ್ಯಾಘ್ರನಾದ ಜಾಧವ್ ನಮ್ಮ ಬೆನ್ನಿಗೆ ಚೂರಿ ಹಾಕಿ ಬಿಜೆಪಿಯವರ ಆಮಿಷಕ್ಕೆ ಬಲಿಯಾಗಿ ಈಗ ಖರ್ಗೆ ವಿರುದ್ಧ ಮತ ಯಾಚಿಸಲು  ಬರುತ್ತಿದ್ದಾನೆ. ಅಂತವನಿಗೆ ಮತ ಹಾಕ್ತೀರಾ ? ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT