ಕರ್ನಾಟಕ

ಬರುವ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರಕ್ಕೆ 25 ಲಕ್ಷ ಕೋಟಿ ರೂ ಮೀಸಲು- ಪ್ರಧಾನಿ ಮೋದಿ

Nagaraja AB

ಚಿಕ್ಕೋಡಿ: ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಿದ್ದು, ಕೃಷಿಕರ ಸರ್ವಾಂಗೀಣ ಅಭಿವೃದ್ಧಿಗೆ 25 ಲಕ್ಷ ಕೋಟಿ ರೂ ಮೀಸಲಿಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಲ್ಲಿನ ಮೈದಾನದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬರುವ 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಅಗತ್ಯ ಸಂಪನ್ಮೂಲ ನಿಗದಿಪಡಿಸಲಾಗುವುದು ಎಂದರು.

ಕಳೆದ ಐದು ವರ್ಷಗಳಲ್ಲಿ ದೇಶದ ಇಂಧನ ವಲಯ ಸುಧಾರಣೆಗೆ ಆದ್ಯತೆ ನೀಡಿದ್ದು, ಮುಂದಿನ ಅವಧಿಯಲ್ಲಿ ಜಲ ಸಂಪತ್ತು ಸದ್ಭಳಕೆಗೆ ಒತ್ತು ಕೊಡಲಾಗುವುದು. ಇದಕ್ಕಾಗಿ ಪ್ರತ್ಯೇಕ ಜಲಶಕ್ತಿ ಸಚಿವಾಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಕೇಂದ್ರದಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂಧನ ವ್ಯವಸ್ಥೆ ಸುಧಾರಣೆಗಾಗಿ ಕೆಲಸ ಮಾಡಲಾಯಿತು. ಪ್ರತಿಯೊಂದು ಹಳ್ಳಿಗೂ ಈಗ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಇನ್ನು ಮುಂದೆ ನೀರಾವರಿಗಾಗಿ ಕೆಲಸ ಮಾಡುತ್ತೇವೆ. ದೇಶದ ಜನತೆಗೆ ಜಲ ಶಕ್ತಿಯ ಮಹತ್ವ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
SCROLL FOR NEXT